ಸರ್ಕಾರಿ ನೌಕರರಿಗೆ ರಜೆ ಘೋಷಿಸಿದ ಯಡಿಯೂರಪ್ಪ: ಷರತ್ತುಗಳು ಅನ್ವಯ

ಕೋವಿಡ್ 19 ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾದರಿಯಲ್ಲಿ ರಾಜ್ಯ ಸರ್ಕಾರದಲ್ಲೂ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಂದಿಸಿ, ರಜೆ ಮಂಜೂರು ಮಾಡಿದ್ದಾರೆ
ಯಡಿಯೂರಪ್ಪ
ಯಡಿಯೂರಪ್ಪ
Updated on

ಬೆಂಗಳೂರು: ಕೋವಿಡ್ 19 ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾದರಿಯಲ್ಲಿ ರಾಜ್ಯ ಸರ್ಕಾರದಲ್ಲೂ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಂದಿಸಿ, ರಜೆ ಮಂಜೂರು ಮಾಡಿದ್ದಾರೆ

50 ವರ್ಷ ಮೀರಿದ ಹಾಗೂ ಮಧುಮೇಹ ಉಸಿರಾಟದ ತೊಂದರೆ, ಮೂತ್ರಪಿಂಡ ಕಾಯಿಲೆ ಹಾಗೂ ಇಂಥ ಇತರೆ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಸರ್ಕಾರಿ ನೌಕರರಿಗೆ ವೇತನ ಸಹಿತ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ.

ಕೋವಿಡ್19 ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತೆ ಕ್ರಮವಾಗಿ ಸಾಮಾಜಿಕ ಅಂತರವನ್ನು ಪಾಲಿಸಲು ಕರ್ನಾಟಕ ನಾಗರಿಕ ಸೇವಾ(ಕೆ.ಸಿ.ಎಸ್. ಆರ್) ನಿಯಮಗಳನ್ನು 1957ನ್ನು ಸಡಿಲಿಸಿ ರಜೆ ಮಂಜೂರು ಮಾಡಿ, ರಾಜ್ಯ ಸರ್ಕಾರ ಸೂಚನೆ ನೀಡಿದೆ.

ದಿನಾಂಕ ಏಪ್ರಿಲ್ 04ರ ವರೆಗೆ ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಹಾಜರುಪಡಿಸಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳ 114ಅಡಿಯಲ್ಲಿ ಪರಿವರ್ತಿತ ರಜೆ ಪಡೆಯಲು ಅರ್ಹರಾಗಿರುತ್ತಾರೆ ಈ ಮೂಲಕ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ನಿಯಂತ್ರಣಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com