ರಾಜ್ಯ
ಹೋಂ ಕ್ವಾರಂಟೈನ್ ಉಲ್ಲಂಘಿಸಿದ್ರೆ ಮಾಸ್ ಕ್ವಾರಂಟೈನ್ ಶಿಕ್ಷೆ: ಬಸವರಾಜ ಬೊಮ್ಮಾಯಿ ಎಚ್ಚರಿಕೆ!
ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡಿದರೆ ಅಂತಹವರು ಮಾಸ್ ಕ್ವಾರಂಟೈನ್ ಶಿಕ್ಷೆ ಎದುರಿಸಬೇಕಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡಿದರೆ ಅಂತಹವರು ಮಾಸ್ ಕ್ವಾರಂಟೈನ್ ಶಿಕ್ಷೆ ಎದುರಿಸಬೇಕಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಲಾಕ್ ಡೌನ್ ಕುರಿತ ರಾಜ್ಯದಲ್ಲಿನ ಪರಿಸ್ಥಿತಿ ಕುರಿತು ಅಧಿಕಾರಿಗಳ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು, ಬೆಂಗಳೂರು ನಗರ ಹಾಗು ಜಿಲ್ಲಾ ಕೇಂದ್ರಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡರು.
ಹೋ ಕ್ವಾರಂಟೈನ್ ಮುದ್ರೆ ಒತ್ತಿಸಿಕೊಂಡಿದ್ದವರು ರಾಜಾರೋಷವಾಗಿ ಸಾರ್ವಜನಿಕವಾಗಿ ಓಡಾಡುತ್ತಿದ್ದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಈ ಸಂಬಂಧ ಅದಾಗಲೇ ಹಲವರ ವಿರುದ್ಧ ಪ್ರಕರಣವನ್ನು ಸಹ ದಾಖಲಿಸಲಾಗಿದೆ.