ಯುಗಾದಿ: ಮರಣ ತಂದ ಬೇವು 

ಹೊಸ ವರ್ಷ ಯುಗಾದಿ ಹಬ್ಬಕ್ಕಾಗಿ ಬೇವಿನ ಸೊಪ್ಪು ಕೀಳಲು ಹೋಗಿದ್ದ ವ್ಯಕ್ತಿಯೊರ್ವ ಮರದಿಂದ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಕಹಿಘಟನೆ ಕೆಪಿ ನಗರದ ಅಗ್ರಹಾರ ಬಳಿ ಸಂಭವಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಹೊಸ ವರ್ಷ ಯುಗಾದಿ ಹಬ್ಬಕ್ಕಾಗಿ ಬೇವಿನ ಸೊಪ್ಪು ಕೀಳಲು ಹೋಗಿದ್ದ ವ್ಯಕ್ತಿಯೊರ್ವ ಮರದಿಂದ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಕಹಿಘಟನೆ ಕೆಪಿ ನಗರದ ಅಗ್ರಹಾರ ಬಳಿ ಸಂಭವಿಸಿದೆ.

35 ವರ್ಷದ ಕೆ.ಪಿ.ಅಗ್ರಹಾರದ ಕುಬೇರ ಮೃತಪಟ್ಟ ದುರ್ದೈವಿ. ಯುಗಾದಿ ಹಬ್ಬದ ದಿನ ಹಿರಿಯರಿಗೆ ಬೇವು-ಬೆಲ್ಲ ನೈವೇದ್ಯ ಮಾಡಬೇಕಿತ್ತು. ಕೊರೊನಾ ಸೋಂಕು ತಡೆಗಟ್ಟಲು ಭಾರತ್ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳು ಬಂದ್ ಆಗಿದ್ದು, ಎಲ್ಲಿಯೂ ಬೇವು ಸಿಕ್ಕಿರಲಿಲ್ಲ.

ಹೀಗಾಗಿ ಕುಬೇರ್ ಮರವೊಂದನ್ನು ಏರಿ ಬೇವು ಕೀಳಲು ಮುಂದಾಗಿದ್ದರು. ಅದೇ ವೇಳೆಯೇ ಕಾಲು ಜಾರಿ ಬಿದ್ದಿದ್ದರು. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಾರ್ಗಮಧ್ಯೆಯೇ ಅವರು ಮೃತಪಟ್ಟದ್ದಾರೆ.

ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕೆ.ಪಿ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಬೇರ ಅವರ ಪತ್ನಿ ಹಾಗೂ ಇಬ್ಬರೂ ಮಕ್ಕಳಿದ್ದು, ಇವರ ಆಕ್ರಂಧನ ಮುಗಿಲು ಮುಟ್ಟಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com