ಬೆಂಗಳೂರು: ಕೊರೋನಾವೈರಸ್ ವಿರುದ್ಧ ಹೋರಾಟದಲ್ಲಿ ತೊಡಗಿರುವ ರಾಜ್ಯದ ಪೋಲೀಸರಿಗೆ ಜೀವವಿಮೆ ಹಾಗೂ ತುಟ್ಟಿಭತ್ಯೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.
ಕೋವಿಡ್ ವಿರುದ್ಧ ಹಗಲು ರಾತ್ರಿ ಶ್ರಮಿಸುತ್ತಿರುವ ಪೋಲೀಸರಿಗೆ 30 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದರು.
ಇದೀಗ ಪೊಲೀಸರು, ಹೋಂ ಗಾರ್ಡ್ಸ್, ಅಗ್ನಿಶಾಮಕ ಸಿಬ್ಬಂದಿ, ಸಿವಿಲ್ ಡಿಫೆನ್ಸ್, ಕಾರಾಗೃಹ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ ಹಾಗೂ ತುಟ್ಟಿಭತ್ಯೆ ಸಿಗ;ಲಿದೆ ಎಂದು ಪ್ರವೀಣ್ ಸೂದ್ ಟ್ವೀಟ್ ಮೂಲಕ ಸಿಹಿ ಸುದ್ದಿ ಕೊಟ್ಟಿದ್ದಾರೆ.
Advertisement