ಐಎಎಫ್ ನೌಕಾದಳ ಮುಖ್ಯಸ್ಥನ ಮೇಲೆ ಹಲ್ಲೆ: ಮೂವರ ಬಂಧನ

ಕ್ಷುಲ್ಲಕ ಕಾರಣಕ್ಕಾಗಿ ಐಎಎಫ್ ನೌಕಾದಳ ಮುಖ್ಯಸ್ಥನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲೂರು ಪೊಲಿಸರು ಮೂವರನ್ನು ಬಂಧಿಸಿದ್ದಾರೆ, ಏಪ್ರಿಲ್ 29 ರಂದು ನಡೆದ ಘಟನೆ ಹಿನ್ನೆಲೆಯಲ್ಲಿ  ದ್ವಾರಕಾನಗರ ನಿವಾಸಿ ಅಮೋದ್ ಸಂಜಯ್ ಎಂಬ ಅಧಿಕಾರಿ ದೂರು ದಾಖಲಿಸಿದ್ದರು
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಐಎಎಫ್ ನೌಕಾದಳ ಮುಖ್ಯಸ್ಥನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲೂರು ಪೊಲಿಸರು ಮೂವರನ್ನು ಬಂಧಿಸಿದ್ದಾರೆ,

ಏಪ್ರಿಲ್ 29 ರಂದು ನಡೆದ ಘಟನೆ ಹಿನ್ನೆಲೆಯಲ್ಲಿ  ದ್ವಾರಕಾನಗರ ನಿವಾಸಿ ಅಮೋದ್ ಸಂಜಯ್ ಎಂಬ ಅಧಿಕಾರಿ ದೂರು ದಾಖಲಿಸಿದ್ದರು.

ದೂರಿನ ಆಧಾರದ ಮೇಲೆ ಪೊಲೀಸರು ಖಾಸಗಿ ಕಂಪನಿ ಎಂಡಿ ಸೇರಿದಂತೆ ಮೂವರನ್ನು ಬಂದಿಸಿದ್ದಾರೆ. ಪತ್ನಿಯೊಂದಿಗೆ ಹತ್ತಿರದ ಅಂಗಡಿಯೊಂದಕ್ಕೆ ದೂರುದಾರ ಅಧಿಕಾರಿ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಾರ್ಟ್ ಮೆಂಟ್ ಮುಂಭಾಗ ಸಡನ್ ಆಗಿ ದ್ವಿಚಕ್ರ ವಾಹನ ಬಂದ ಕಾರಣ ಬ್ರೇಕ್ ಹಾಕಲಾಯಿತು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ, ಅಲ್ಲಿಂದ ಹೋದ ಬೈಕ್ ಸವಾರ ಮತ್ತೆ ಇಬ್ಬರೊಂದಿಗೆ ವಾಪಸ್ ಬಂದು ಅಮೋದ್ ಅವರ ಕಾರಿನ ಕೀ ಕಸಿದು ಕೊಂಡಿದ್ದಾರೆ.

ಸುಮಾರು 15 ರಿಂದ 20 ನಿಮಿಷದವರೆಗೆ ಅಮೋದ್ ಅವರನ್ನು ಬೈಯ್ದು ಅವರ ಮೇಲೆ ಹಲ್ಲೆ ನಡೆಸಿದ್ದಾಗಗಿ ದೂರಿನಲ್ಲಿ ತಿಳಿಸಲಾಗಿದೆ. ಜೊತೆಗೆ ಕಾರಿನ ಬಂಪರ್ ಗೂ ಹಾನಿ ಮಾಡಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com