ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಥಣಿ: ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ

ಸಾಲಕ್ಕೆ ಹೆದರಿ ರೈತ ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ನಡೆದಿದೆ.
Published on

ರಾಯಬಾಗ/ಚಿಕ್ಕೋಡಿ: ಸಾಲಕ್ಕೆ ಹೆದರಿ ರೈತ ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ನಡೆದಿದೆ.

ರೈತ ಸಂಗಪ್ಪ ಬಸಪ್ಪ ಯಲ್ಲಟ್ಟಿ(೫೦) ಮೃತ ದುರ್ದೈವಿ. ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೃಷ್ಣಾ ನದಿ ಪ್ರವಾಹ ಬಂದಾಗ 6 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು, ಮನೆ ಪ್ರವಾಹದಲ್ಲಿ ಮುಳುಗಿ ಸಂಪೂರ್ಣ ನಾಶವಾಗಿ ಅಪಾರ ಹಾನಿಯಾಗಿತ್ತು. ಅಲ್ಲದೇ ರೈತ ಸಿಂಡಿಕೇಟ್ ಬ್ಯಾಂಕ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಸ್ಥಳೀಯ ಸಹಕಾರಿ ಸಂಘದಲ್ಲಿ ಸಾಲ ಹಾಗೂ ಕೈಗಡ ಸೇರಿ 5 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದಾರೆ.

ತಾವು ಮಾಡಿರುವ ಸಾಲ ತೀರಿಸುವುದು ಹೇಗೆಂದು ಮನನೊಂದು ಸಂಗಪ್ಪ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೈತನಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಪತ್ನಿ ಇದ್ದಾರೆ.

ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com