ಬೆಂಗಳೂರು: ಸಿಗರೇಟ್ ವ್ಯಾಪಾರಿಗಳಿಂದ ಲಂಚ ಪಡೆದ ಆರೋಪದ ಹಿನ್ನೆಲೆ ಮೂವರು ಸಿಸಿಬಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎಸಿಪಿ ಪ್ರಭುಶಂಕರ್, ಇನ್ಸ್ಪೆಕ್ಟರ್ಗಳಾದ ಅಜಯ್ ಹಾಗೂ ನಿರಂಜನ್ ಅವರುಗಳ ವಿರುದ್ಧ ನಗರದ ಕಾಟನ್ ಪೇಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಿಗರೇಟ್ ವ್ಯಾಪಾರಿ ಆದಿಲ್ ಎಂಬಾತನ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ತನಿಖೆ ನಡೆಸಿದ್ದು ಈ ವೇಳೆ ಸಿಗರೇಟ್ ವ್ಯಾಪಾರಿಗಳಿಂದ ಲಂಚ ಸ್ವೀಕರಿಸಿರುವುದು ಸಾಬೀತಾಗಿದೆ. ಇದಾದ ನಂತರ ಅವರನ್ನು ಅಮಾನತು ಮಾಡಲಾಗಿತ್ತು. ಆರೋಪಿಗಳ ಬಳಿ ಇದ್ದ 30 ಲಕ್ಷ ರು. ಹಣ ಸಹ ವಶಕ್ಕೆ ಪಡೆಯಲಾಗಿದ್ದು ಇದೀಗ ಅವರುಗಳನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ನಡುವೆ ಪ್ರಕರಣದ ಸಂಬಂಧ ಗೆ ಡಿಜಿ ಮತ್ತು ಐಜಿ ಪ್ರವೀಣ್ ಸೂದ್ ಅವರಿಗೂ ವರದಿ ನೀಡಲಾಗಿದೆ. ಲಾಕ್ಡೌನ್ ವೇಳೆ ಸಿಗರೇಟ್ ವ್ಯಾಪಾರಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ಎಂಬ ಭರವಸೆಯೊಡನೆ ಲಂಚ ಸ್ವೀಕರಿಸಿದ್ದಾರೆ ಎಂದು ತಿಳಿದುಬಂದಿದೆ.
Advertisement