ಮಂಡ್ಯ ಮೈಷುಗರ್ ಕಾರ್ಖಾನೆ ಸಂಪೂರ್ಣ ಖಾಸಗೀಕರಣ ಇಲ್ಲ

ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆ ಪೂರ್ಣ ಖಾಸಗೀಕರಣ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಮೈ ಶುಗರ್ ಕಾರ್ಖಾನೆ
ಮೈ ಶುಗರ್ ಕಾರ್ಖಾನೆ

ಬೆಂಗಳೂರು: ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆ ಪೂರ್ಣ ಖಾಸಗೀಕರಣ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಮಂಡ್ಯ ಮೈ ಶುಗರ್ ಕಾರ್ಖಾನೆಯ ಮಾಲೀಕತ್ವವನ್ನು ರಾಜ್ಯ ಸರ್ಕಾರವೇ ಇಟ್ಟುಕೊಳ್ಳಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕೂ ಕಾರ್ಖಾನೆಯನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ಒಪ್ಪಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿ ನೀಡಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಂದಿನ‌ ಸಚಿವ ಸಂಪುಟ ಸಭೆಯಲ್ಲಿ ಇದನ್ನು ಚರ್ಚೆಗೆ ತರಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಕಾರ್ಯಾಚರಣೆ ಮತ್ತು ನಿರ್ವಹಣೆಯಡಿ ಮೈ ಶುಗರ್ ಕಾರ್ಖಾನೆ ಉಳಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಕಾರ್ಖಾನೆಯ ಮಾಲೀಕತ್ವ ಸರ್ಕಾರದ ಬಳಿಯೇ ಇರಲಿದೆ ಎಂದು ತಿಳಿದುಬಂದಿದೆ.

ಇನ್ನು ಈ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ಶಾಸಕ,ಮಾಜಿ ಸಚಿವರೂ ಆದ ಸಿ.ಎಸ್.ಪುಟ್ಟರಾಜು ಅವರು, ಸರ್ಕಾರದ ಸದ್ಯದ ನಡೆಯನ್ನು ನೋಡಿದರೆ ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಮತ್ತು ಪಿಎಸ್‌ಎಸ್‌ಕೆ ಕಾರ್ಖಾನೆಗಳು ಆರಂಬವಾಗುವುದು ಅನುಮಾನ ಎಂದು ಹೇಳಿದ್ದರು. ಅಲ್ಲದೆ ಮೈ ಶುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡಲು ಬಿಡುವುದಿಲ್ಲ ಎಂದೂ ಎಚ್ಚರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com