ರಾಮನಗರ: ಮಲಗಿದ್ದ ವೃದ್ಧೆ ಚಿರತೆಗೆ ಬಲಿ

ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ‌ಮತ್ತೆ ಚಿರತೆ ಅಟ್ಟಹಾಸ ಮೆರೆದಿದೆ. ಮನೆಯ ಹೊರಗಡೆ ಮಲಗಿದ್ದ ವೃದ್ಧೆ ಮೇಲೆ ಚಿರತೆಯೊಂದು ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಮಾಗಡಿ ತಾಲ್ಲೂಕಿನ ಕೊತ್ತಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ‌ಮತ್ತೆ ಚಿರತೆ ಅಟ್ಟಹಾಸ ಮೆರೆದಿದೆ. ಮನೆಯ ಹೊರಗಡೆ ಮಲಗಿದ್ದ ವೃದ್ಧೆ ಮೇಲೆ ಚಿರತೆಯೊಂದು ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಮಾಗಡಿ ತಾಲ್ಲೂಕಿನ ಕೊತ್ತಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

68 ವರ್ಷದ ಗಂಗಮ್ಮ ಮೃತ ವೃದ್ಧೆ. ಚಿರತೆ ವೃದ್ಧೆಯ ಶವವನ್ನು ಭಾಗಶಃ ತಿಂದಿದ್ದು, ಮನೆಯ ಹತ್ತಿರದಲ್ಲಿ ದೇಹದ ಭಾಗಗಳು ಪತ್ತೆಯಾಗಿವೆ.ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ‌ ಮಾಗಡಿ ಪೊಲೀಸರು ಭೇಟಿ ನೀಡಿದ್ದಾರೆ. 

ಕಳೆದ‌ ಶನಿವಾರವಷ್ಟೇ ಮಾಗಡಿ ತಾಲ್ಲೂಕಿನ ಕದರಯ್ಯನ ಪಾಳ್ಯದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಮೂರು ವರ್ಷದ ಬಾಲಕನನ್ನು ಎಳೆದೊಯ್ದು ಕೊಂದು ಹಾಕಿತ್ತು.ಇದೀಗ ಮತ್ತೆ ಚಿರತೆ ದಾಳಿ ಮುಂದುವರೆಸಿದ್ದು, ಸ್ಥಳೀಯರು ಇನ್ನಷ್ಟು ಭಯಗೊಂಡಿದ್ದಾರೆ‌.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com