ಮಹಾಮಾರಿ ಕೊರೋನಾಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆ

ಲಾಕ್ ಡೌನ್ ನಿಂದ ಸಡಿಲಿಕೆ ನೀಡಿದ ಬೆನ್ನಲ್ಲೇ ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದರ ಮಧ್ಯೆ ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಲಾಕ್ ಡೌನ್ ನಿಂದ ಸಡಿಲಿಕೆ ನೀಡಿದ ಬೆನ್ನಲ್ಲೇ ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದರ ಮಧ್ಯೆ ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. 

ಬೆಂಗಳೂರಿನ ನಾಗರಬಾವಿ ಬಳಿಯ ಪಾಪರೆಡ್ಡಿ ಪಾಳ್ಯದ ನಿವಾಸಿ ಹೃದಯಾಘಾತದಿಂದ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆಸ್ಪತ್ರೆ ಸಿಬ್ಬಂದಿ ಕೊರೋನಾ ಟೆಸ್ಟ್ ಮಾಡಿಸಿದ್ದಾರೆ. 

ಲ್ಯಾಬ್ ಪರೀಕ್ಷೆಯಲ್ಲಿ ವ್ಯಕ್ತಿಗೆ ಕೊರೋನಾ ತಗುಲಿರುವುದು ದೃಢಪಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಕೊರೋನಾಗೆ ಬಲಿಯಾದರವ ಸಂಖ್ಯೆ 8ಕ್ಕೆ ಏರಿಯಾಗಿದೆ. ಇನ್ನು ರಾಜ್ಯಾದ್ಯಂತ ಇಲ್ಲಿಯವರೆಗೆ ಕೋವಿಡ್-19ಗೆ 38 ಮಂದಿ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ. ಈ ಪೈಕಿ 50 ಮಂದಿ ಗುಣಮುಖರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com