ಮುಂಗಾರಿಗೆ ರಸಗೊಬ್ಬರ ಕೊರತೆಯಾಗದು- ಸದಾನಂದ ಗೌಡ

ರಾಜ್ಯದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತ ಸಮೂಹಕ್ಕೆ ರಸಗೊಬ್ಬರದ ಕೊರತೆ ಆಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ
ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ
Updated on

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತ ಸಮೂಹಕ್ಕೆ ರಸಗೊಬ್ಬರದ ಕೊರತೆ ಆಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲೂ ರಸಗೊಬ್ಬರ ಕಾರ್ಖಾನೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ. ದೇಶದ ಯಾವುದೇ ಭಾಗದಲ್ಲೂ ರಸಗೊಬ್ಬರಕ್ಕೆ ಕೊರತೆಯಾಗುವುದಿಲ್ಲ ಎಂದಿದ್ದಾರೆ.

ನಗರದಲ್ಲಿಂದು ರಾಜ್ಯದ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸಗೊಬ್ಬರಕ್ಕೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯಕ್ಕೆ ಅಗತ್ಯವಾಗಿರುವ ಗೊಬ್ಬರ ದಾಸ್ತಾನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com