ಬೆಂಗಳೂರು: 2 ಶ್ರಮಿಕ್ ರೈಲಿನಲ್ಲಿ ತವರಿಗೆ ಮರಳಿದ ವಲಸೆ ಕಾರ್ಮಿಕರು
ಬೆಂಗಳೂರು: ಲಾಕ್'ಡೌನ್ ನಿಂದ ನಗರದಲ್ಲಿ ಸಿಲುಕಿದ್ದ ಹೊರರಾಜ್ಯದ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರಯಾಣಿಕನ್ನು ಎರಡು ಶ್ರಮಿಕ್ ವಿಶೇಷ ರೈಲುಗಳ ಮೂಲಕ ಬುಧವಾರ ಅವರ ತವರು ರಾಜ್ಯಗಳಿಗೆ ಕಳುಹಿಸಲಾಯಿತು.
ನಗರದ ಕೆಎಸ್ಆರ್ ರೈಲು ನಿಲ್ದಾಣದ ಹಾಗೂ ಹೊಸೂರು ರೈಲು ನಿಲ್ದಾಣಗಳಿಂದ ರಾಜಸ್ತಾನ ಮತ್ತು ಬಿಹಾರಕ್ಕೆ ತಲಾ ಒಂದೊಂದು ರೈಲು ತೆರಳಿದವು.
ಪ್ರಯಾಣಕ್ಕೂ ಮುನ್ನ ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ ಒಳಪಡಿಸಲಾಯಿತು. ಈ ಎರಡೂ ರೈಲುಗಳಲ್ಲಿ ಸುಮಾರು ಸಾವಿರ ಕಾರ್ಮಿಕರು ತವರು ರಾಜ್ಯಗಳಿಗೆ ತೆರಳಿದ್ದರು. ಪ್ರತಿ ಪ್ರಯಾಣಿಕರಿಗೂ ಆಹಾರ ಪೊಟ್ಟಣ, ಬಿಸ್ಕೆಟ್ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಲಾಗಿತ್ತು.
ವಲಸಿಗರಿಂದ ಬೇಡಿಕೆ ಕಡಿಮೆಯಾಗುತ್ತಿದ್ದು, ಇದರ ಜೊತೆಗೆ ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯ ಸರ್ಕಾರಗಳು ವಲಸೆ ಕಾರ್ಮಿಕರನ್ನು ರಾಜ್ಯಕ್ಕೆ ಸೇರಿಸಿಕೊಳ್ಳಲು ಹಿಂದೇಟು ಹಾಕುತ್ತಿವೆ. ಹೀಗಾಗಿ ರೈಲುಗಳ ಸಂಖ್ಯೆಯನ್ನು ಇಳಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ವಲಸೆ ಕಾರ್ಮಿಕರನ್ನು ರಾಜ್ಯದೊಳಗೆ ಬಿಟ್ಟುಕೊಳ್ಳಲು ಪಶ್ಚಿಮ ಬಂಗಾಳ ನಿರಾಕರಿಸಿತ್ತು ಇದರ ಪರಿಣಾಮ ಬುಧವಾರ ಐದು ರೈಲುಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ರೈಲು ಸಂಚಾರದ ವೇಳೆ ಸರ್ಕಾರ ನೀಡಿರುವ ಎಲ್ಲಾ ರೀದಿಯ ಮಾರ್ಗದರ್ಶನಗಳನ್ನು ಅನುಸರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ