ತಳವಾರ,ಪರಿವಾರ,ಸಿದ್ದಿ ಜನಾಂಗ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ

ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.
ಸರ್ಕಾರದ ಅಧಿಸೂಚನೆ
ಸರ್ಕಾರದ ಅಧಿಸೂಚನೆ
Updated on

ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.

ಈ ಕುರಿತು ಗಜೆಟ್ ಅಧಿಸೂಚನೆ ಜಾರಿಯಾಗಿದ್ದು, ಪರಿಶಿಷ್ಟ ಪಂಗಡಗಳ ಸಂವಿಧಾನ ತಿದ್ದುಪಡಿ ಕಾಯ್ದೆ 2020ರ ರ ಅನ್ವಯ  ಪರಿಷ್ಕೃತ ಪಟ್ಟಿಯಲ್ಲಿ ತಳವಾರ ಮತ್ತು ಪರಿವಾರ ಹಾಗೂ ಸಿದ್ಧಿ ಜನಾಂಗವನ್ನು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲಾಗಿದೆ.

ಸರ್ಕಾರದ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಹಿಂದುಳಿದ ಈ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com