ಆರ್ ಆರ್ ನಗರ ಉಪ ಚುನಾವಣೆ: ಮುನಿರತ್ನ ಪರ ಪ್ರಚಾರ ಮಾಡಿದ್ದ ದರ್ಶನ್ ವಿರುದ್ಧ ಪ್ರಕರಣ ದಾಖಲು!

ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಚಾರದಲ್ಲಿ ನಟಿ ಅಮೂಲ್ಯ ಹಾಗೂ ದರ್ಶನ್
ಪ್ರಚಾರದಲ್ಲಿ ನಟಿ ಅಮೂಲ್ಯ ಹಾಗೂ ದರ್ಶನ್
Updated on

ಬೆಂಗಳೂರು: ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.

ನಗರದ ರಾಜರಾಜೇಶ್ವರಿ ನಗರದಲ್ಲಿ ನಟ ದರ್ಶನ್ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದರು. ಈ ವೇಳೆ ದರ್ಶನ್ ಮತ್ತು ಇತರೆ ನಾಯಕರು ಕೋವಿಡ್ ನಿಯಮವಾಳಿಗಳನ್ನು ಗಾಳಿಗೆ ತೂರಿ ಸಾಮಾಜಿಕ ಅಂತರ ಪಾಲನೆ ಮಾಡದೇ ಪ್ರಚಾರ ನಡೆಸಿದ್ದರು ಎಂಬ ಆರೋಪದ ಮೇರೆಗೆ  ದರ್ಶನ್ ವಿರುದ್ಧ ದೂರು ದಾಖಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ನಟ ದರ್ಶನ್ ಮತ್ತಿತ್ತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com