ಶಾಲಾ ಪುನಾರಂಭ ಕುರಿತು 5 ದಿನಗಳಲ್ಲಿ ನಿರ್ಧಾರ: ಸುರೇಶ್‌ ಕುಮಾರ್

ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಮುಂದಿನ ಐದು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಸಚಿವ ಎಸ್‌.ಸುರೇಶ್ ‌ಕುಮಾರ್ ಬುಧವಾರ ಹೇಳಿದ್ದಾರೆ.
ಸುರೇಶ್‌ಕುಮಾರ್
ಸುರೇಶ್‌ಕುಮಾರ್
Updated on

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಮುಂದಿನ ಐದು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಸಚಿವ ಎಸ್‌.ಸುರೇಶ್ ‌ಕುಮಾರ್ ಬುಧವಾರ ಹೇಳಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರದ ಸಭೆಯಲ್ಲಿ ಶಾಲಾ ಪುನಾರಂಭ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.

ಸಂಬಂಧಿಸಿದ ಇಲಾಖೆಗಳ ಎಲ್ಲಾ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳೊಮದಿಗೆ ಸಭೆ ನಡೆಸಲಾಗುತ್ತದೆ ಮತ್ತು ಸನ್ನಿವೇಶಗಳನ್ನು ಪರಿಶೀಲಿಸಲಾಗುತ್ತಿದೆ. ಎಲ್ಲಾ ವಲಯಗಳಿಂದ ಪ್ರತಿಕ್ರಿಯೆ ಪಡೆದ ನಂತರ ಅದನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು

ಇದಕ್ಕೂ ಮುನ್ನಹಂತ ಹಂತವಾಗಿ ಶಾಲೆಗಳನ್ನು ಮತ್ತೆ ತೆರೆದರೆ ಉತ್ತಮ ಎಂದು ತಜ್ಞರು ಸೂಚಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.ಎಲ್ಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣವನ್ನು ಪಡೆಯಲು ಸಾಧ್ಯವಿಲ್ಲ, ಅದಕ್ಕಾಗಿಯೇ ನಾವು ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಯೋಚಿಸುತ್ತಿದ್ದೇವೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com