ಆನೆ ದಂತ ಮಾರಾಟ ಮಾಡಲು ಯತ್ನ: ನಾಲ್ವರು ಆರೋಪಿಗಳ ಬಂಧನ

ಮೈಸೂರಿನಲ್ಲಿ ಆನೆ ದಂತ ಮಾರಾಟ ಮಾಡಲು ಯತ್ನ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮೈಸೂರು: ಮೈಸೂರಿನಲ್ಲಿ ಆನೆ ದಂತ ಮಾರಾಟ ಮಾಡಲು ಯತ್ನ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 

ಪ್ರೆಸ್ಟಿನ್ ಸಿಲ್ವ, ಜಯಪ್ರಕಾಶ್, ಮೋಹನ್, ರಮೇಶ್ ಬಂಧಿತ ಆರೋಪಿಗಳೆಂದು ತಿಳಿದುಬಂದಿದೆ. ಪ್ರೆಸ್ಟಿನ್ ಹಾಗೂ ಜಯಪ್ರಕಾಶ್ ಇಬ್ಬರೂ ಕೇರಳ ಮೂಲಕ ತ್ರಿವೆಂಡ್ರಮ್ ಮೂಲದವರಾಗಿದ್ದು, ಮತ್ತಿಬ್ಬರು ಆರೋಪಿಗಳಾದ ಮೋಹನ್ ಹಾಗೂ ರಮೇಶ್ ಇಬ್ಬರೂ ಉದಯಗಿರಿ ನಿವಾಸಿಗಳಾಗಿದ್ದಾರೆಂದು ವರದಿಗಳು ತಿಳಿಸಿವೆ.

ಪ್ರೆಸ್ಟಿನ್ ಸಿಲ್ವ ಪ್ರಮುಖ ಆರೋಪಿಯೆಂದು ಹೇಳಲಾಗುತ್ತಿದೆ. ಈತನ ವಿರುದ್ಧ ಕರ್ನಾಟಕದಲ್ಲಿ ಅಷ್ಟೇ ಅಲ್ಲದೆ, ಕೇರಳದಲ್ಲಿಯೂ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗುತ್ತಿದೆ. 

ಆರೋಪಿಗಳು ಪ್ರತೀ ಕೆಜಿ ಆನೆ ದಂತವನ್ನು ರೂ.20,000ಕ್ಕೆ ಮಾರಾಟ ಮಾಡುತ್ತಿದ್ದರು ಹಾಗೂ ಬಂಧಿತರಾಗಿರುವ ರಮೇಶ್ ಹಾಗೂ ಮೋಹನ್, ಜಯಪ್ರಕಾಶ್ ವಿಗ್ರಹ ಕೆತ್ತುವ ಕಲಾವಿದರಾಗಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com