ಡಿಸಿಸಿ ಬ್ಯಾಂಕ್ ಚುನಾವಣೆ: ಶಾಸಕಿ ಅಂಜಲಿ ನಿಂಬಾಳ್ಕರ್'ಗೆ ಸೋಲು

ತೀವ್ರ ಕುತೂಹಳ ಕೆರಳಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್'ನ 3 ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಖಾನಾಪುರ ಪಿಕೆಪಿಎಸ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಸೋಲನ್ನು ಅನುಭವಿಸಿದ್ದಾರೆ. 
ಅಂಜಲಿ ನಿಂಬಾಳ್ಕರ್
ಅಂಜಲಿ ನಿಂಬಾಳ್ಕರ್
Updated on

ಬೆಳಗಾವಿ: ತೀವ್ರ ಕುತೂಹಳ ಕೆರಳಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್'ನ 3 ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಖಾನಾಪುರ ಪಿಕೆಪಿಎಸ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಸೋಲನ್ನು ಅನುಭವಿಸಿದ್ದಾರೆ. 

ಶಾಸಕಿ ಅಂಜಲಿ ವಿರುದ್ಧ 2 ಮತಗಳ ಅಂತರದಿಂದ ಮಾಜಿ ಶಾಸಕ ಅರವಿಂದ ಪಾಟೀಲ ಅವರು ಜಯಭೇರಿ ಬಾರಿಸಿದ್ದಾರೆ. 

ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡಿದ್ದ ಅರವಿಂದ ಪಾಟೀಲರಿಗೆ 27 ಮತಗಳು ಬಿದ್ದಿದ್ದರೆ, ಅಂಜಲಿಯವರಿಗೆ 25 ಮತಗಳು ಬಿದ್ದಿವೆ. 

ಪ್ರತ್ಯೇಕ ಬಣಗಳಾಗಿದ್ದ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಕತ್ತಿ ಹಾಗೂ ಜಾರಕಿಹೊಳಿ ಸಹೋದರರು ಪಕ್ಷದ ವರಿಷ್ಠರ ಆದೇಶದಿಂದಾಗಿ ಒಂದಾಗಿ ಅವಿರೋಧ ಆಯ್ಕೆದೆ ನಡೆಸಿದ್ದ ಪ್ರಯತ್ನ ಫಲಕೊಡಲಿಲ್ಲ. 

ಎಲ್ಲರ ಆಶೀರ್ವಾದದಿಂದ ಮುಂದೆ ಕೆಲಸ ಮಾಡುತ್ತೇನೆ. ನನಗೆ 25 ಮತ್ತು ವಿರೋಧ ಪಕ್ಷಕ್ಕೆ 27 ಮತಗಳು ಬಂದಿವೆ. ಕೇವಲ 2 ಮತಗಳಿಂದ ಸೋತಿದ್ದೇನೆ. ಕ್ರಾಸ್ ವೋಟಿಂಗ್ ಆಗಿಲ್ಲ. ನಾನು ನಂಬಿದವರು ನನಗೆ ಮತ ಹಾಕಿದ್ದಾರೆ. ನನಗೆ ಯಾವುದೇ ರೀತಿಯ ಹಿನ್ನಡೆಯಾಗಿಲ್ಲ. ಹೆಣ್ಣು ಮಗಳಾಗಿ ನಾನು ಇಷ್ಟು ಹೋರಾಟ ಮಾಡಿರುವುದು ಹೆಮ್ಮೆಯೆನಿಸುತ್ತಿದೆ ಎಂದು ಅಂಜಲಿಯವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com