ರಾಯಚೂರು: ಕಾರುಗಳ ಮುಖಾಮುಖಿ ಡಿಕ್ಕಿ; ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ನಗರದ ಹೊರವಲಯದ ಮಂತ್ರಾಲಯ ರಸ್ತೆಯ ಮಂಜರ್ಲಾ ಕ್ರಾಸ್ ಬಳಿ ಸಂಭವಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ರಾಯಚೂರು: ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ನಗರದ ಹೊರವಲಯದ ಮಂತ್ರಾಲಯ ರಸ್ತೆಯ ಮಂಜರ್ಲಾ ಕ್ರಾಸ್ ಬಳಿ ಸಂಭವಿಸಿದೆ.

ಮೃತರನ್ನು ಅಭಿಷೇಕ, ಬಸವರಾಜು, ಗಣೇಶ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸಿದ್ಧಾರ್ಥ, ಭೀಮರೆಡ್ಡಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಯರಗೇರಾದಿಂದ ಬರುತ್ತಿದ್ದ ಕಾರು ಮತ್ತು ರಾಯಚೂರಿನಿಂದ ಹೋಗುತ್ತಿದ್ದ ಕಾರಿಗಳೆರಡರ ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳೆಲ್ಲರೂ ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ವರದಿ ಆಗಿದೆ.
ಘಟನೆಗೆ ಸಂಬಂಧಿಸಿದಂತೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com