ಹಿರಿಯ ಪತ್ರಕರ್ತ ರವಿ ಬೆಳೆಗೆರೆ ನಿಧನ

ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ನ ಸ್ಥಾಪಕ ರವಿ ಬೆಳೆಗೆರೆ (62) ನ.12 ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 
ಹಿರಿಯ ಪತ್ರಕರ್ತ ರವಿ ಬೆಳೆಗೆರೆ
ಹಿರಿಯ ಪತ್ರಕರ್ತ ರವಿ ಬೆಳೆಗೆರೆ
Updated on

ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ನ ಸ್ಥಾಪಕ ರವಿ ಬೆಳೆಗೆರೆ (62) ನ.12 ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿ ಪ್ರಾರಂಭಿಸಿದ್ದ ಅವರು, ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು, ನಂತರ 1995 ರಲ್ಲಿ ಹಾಯ್ ಬೆಂಗಳೂರು ಟಾಬ್ಲಾಯ್ಡ್ ಪತ್ರಿಕೆಯನ್ನು ಪ್ರಾರಂಭಿಸಿದ್ದರು. 

ರವಿ ಬೆಳೆಗೆರೆ ಅವರ ಬಾಟಮ್ ಐಟಮ್, ಖಾಸ್ ಬಾತ್ ಅಂಕಗಳು ಅತ್ಯಂತ ಜನಪ್ರಿಯ. ಹಿಮಾಗ್ನಿ, ನೀನಾ ಪಾಕಿಸ್ತಾನ? ಡಿ ಕಂಪನಿ, ದಂಗೆಯ ದಿನಗಳು ಸೇರಿದಂತೆ ಅನೇಕ ಜನಪ್ರಿಯ ಕೃತಿಗಳನ್ನು ರಚಿಸಿದ್ದರು.

ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ್ದ ರವಿ ಬೆಳೆಗೆರೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ. ರವಿ ಬೆಳೆಗೆರೆ ಅವರು ಸ್ಥಾಪಿಸಿರುವ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com