ಪತ್ರಕರ್ತ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನ

 ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. 
ರವಿ ಬೆಳಗೆರೆ ಅಂತ್ಯಸಂಸ್ಕಾರ
ರವಿ ಬೆಳಗೆರೆ ಅಂತ್ಯಸಂಸ್ಕಾರ
Updated on

ಬೆಂಗಳೂರು: ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. 

ಹೃದಯಾಘಾತದಿಂದ ನಿಧನವಾಗಿದ್ದ ರವಿ ಬೆಳಗೆರೆ ಅವರ ಅಂತ್ಯ ಸಂಸ್ಕಾರವನ್ನು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಬ್ರಾಹ್ಮಣ ಪದ್ದತಿಯಂತೆ ನೆರವೇರಿಸಲಾಗಿದೆ.

ಪುತ್ರರಾದ ಕರ್ಣ ಹಾಗೂ ಹಿಮವಂತ ರವಿ ಅವರ ಚಿತೆಗೆ ಅಗ್ನಿ ಸ್ಪರ್ಷ ಮಾಡಿದ್ದಾರೆ. ಶಿವರಾಂ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದರು.

ಗುರುವಾರ ತಡರಾತ್ರಿ ನಿಧನರಾಗಿದ್ದ ಪತ್ರಕರ್ತ ರವಿ ಬೆಳಗೆರೆ ಅವರ ಪ್ರಾರ್ಥಿವ ಶರೀರವನ್ನು ಕನಕಪುರ ರಸ್ತೆಯ ಕರಿಷ್ಮಾ ಹಿಲ್ಸ್  ಮನೆಗೆ ತಂದು ಬಳಿಕ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಪದ್ಮನಾಭ ನಗರದಲ್ಲಿರೋ ಪ್ರಾರ್ಥನಾ ಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ  ಇಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com