ಬೆಂಗಳೂರು: ರಾಜ್ಯ ಹೆದ್ದಾರಿಗಳ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರು ದರೋಡೆಕೊರರನ್ನು ಬಂಧಿಸುವಲ್ಲಿ ನೆಲಮಂಗಲ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ನೆಲಮಂಗಲದ ಗಿರೀಶ್ (23), ಬಿ.ಎಸ್ ಗೋವಿಂದರಾಜು (22), ಅನೂಪ್ ಮೋಹನ್ (23) ಹಾಗೂ ಎಚ್.ಪಿ.ಪುನೀತ್ ಕುಮಾರ್ ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಆರೋಪಿ ರಘುಕುಮಾರ್(23) ಪರಾರಿಯಾಗಿದ್ದಾನೆ. ಬಂಧಿತರಿಂದ ಕೃತ್ಯಕ್ಕೆ ಬಳಸುತ್ತಿದ್ದ 6 ಬೈಕ್ಗಳು, 1 ಕಾರು, 7 ವಿವಿಧ ಬಗೆಯ ಮಾರಕಾಸ್ತ್ರಗಳು, ಖಾರದ ಪುಡಿ ಹಾಗೂ 4 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Advertisement