ರಾಜ್ಯದ ಅನೇಕ ಕಡೆ ಅಸಾಧಾರಣಾ ಮಳೆ ಸಂಭವ

ರಾಜ್ಯದಲ್ಲಿ  ಈಶಾನ್ಯ ಮುಂಗಾರು ಚುರುಕಾಗಿದ್ದು, ಮೋಡ ಕವಿದ ವಾತಾವರಣ ಜೊತೆಗೆ ಅನೇಕ ಕಡೆ  ಅಸಾಧಾರಣಾ ಮಳೆಯಾಗುವ ಸಾಧ್ಯತೆಗಳಿವೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ  ಈಶಾನ್ಯ ಮುಂಗಾರು ಚುರುಕಾಗಿದ್ದು, ಮೋಡ ಕವಿದ ವಾತಾವರಣ ಜೊತೆಗೆ ಅನೇಕ ಕಡೆ  ಅಸಾಧಾರಣಾ ಮಳೆಯಾಗುವ ಸಾಧ್ಯತೆಗಳಿವೆ. 

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಾಗೂ ಪೂರ್ವ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾತಾವರಣದಲ್ಲಿ ಉಂಟಾಗುತ್ತಿರುವ ಬದಲಾವಣೆಗಳಿಂದಾಗಿ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ತಣ್ಣನೆಯ ಗಾಳಿ  ಬೀಸುತ್ತಿದೆ. ಇದರಿಂದ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದೂ  ಹವಾಮಾನ ಇಲಾಖೆ  ತಿಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com