ಮರಾಠ ಅಭಿವೃದ್ಧಿ ನಿಗಮಕ್ಕೂ, ಭಾಷೆಗೂ ಸಂಬಂಧವಿಲ್ಲ: ಡಿಸಿಎಂ ಲಕ್ಷ್ಮಣ್ ಸವದಿ ಸಮರ್ಥನೆ

ರಾಜ್ಯದಲ್ಲಿ ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಆದೇಶ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕ್ರಮವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ವಾಗತಿಸಿದ್ದಾರೆ.
ಲಕ್ಷ್ಮಣ್ ಸವದಿ
ಲಕ್ಷ್ಮಣ್ ಸವದಿ
Updated on

ಬೆಂಗಳೂರು: ರಾಜ್ಯದಲ್ಲಿ ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಆದೇಶ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕ್ರಮವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ವಾಗತಿಸಿದ್ದಾರೆ.

ಮುಂಬೈ-ಕರ್ನಾಟಕ ಭಾಗದ ನಾಯಕರೂ ಆಗಿರುವ ಸವದಿ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದರಿಂದ ಸಾಮಾಜಿಕ ಸಮಾನತೆಗೆ ಅವಕಾಶವಾಗುತ್ತದೆ. ಈ ಸಮುದಾಯದಲ್ಲಿ ಅತ್ಯಂತ ಬಡವರು ಮತ್ತು ಹಿಂದುಳಿದವರು ಇದ್ದಾರೆ. ಅವರ ಸಮಗ್ರ ಅಭಿವೃದ್ಧಿಗೆ ಈ ನಿಗಮದ ಸ್ಥಾಪನೆ ಸೂಕ್ತ ಎಂದು ಬಲವಾಗಿ ಸಮರ್ಥಿಸಿದ್ದಾರೆ.

ಮರಾಠ ಎಂದಾಕ್ಷಣ ಕೇವಲ ಭಾಷೆ ಆಧಾರದಲ್ಲಿ ಪರಿಗಣಿಸುವುದು ಸರಿಯಲ್ಲ. ಇದು ಸಮುದಾಯದ ಅಭಿವೃದ್ಧಿಯ ವಿಷಯವಾಗಿದೆ ಎಂದರು. ಇನ್ನು ಇದೇ ವೇಳೆ ವೀರಶೈವ ಲಿಂಗಾಯತರ ಸಮುದಾಯದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮತ್ತು ಹಿಂದುಳಿದವರು ಇದ್ದಾರೆ. ಅವರಿಗೆ ಅನುಕೂಲ ಕಲ್ಪಿಸುವ ಪ್ರತ್ಯೇಕ ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು ಸವದಿ ಯಡಿಯೂರಪ್ಪರಿಗೆ ಮನವಿ ಸಲ್ಲಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com