ನಾಳೆ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ ಗುರುವಾರ ನಡೆಯಲಿದೆ. 
ಡಿಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಅಮರ್ತ್ಯ ಹೆಗಡೆ
ಡಿಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಅಮರ್ತ್ಯ ಹೆಗಡೆ
Updated on

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ ಗುರುವಾರ ನಡೆಯಲಿದೆ. 

ನಗರದ ಖಾಸಗಿ ಹೋಟೆಲ್ ನಲ್ಲಿ ಐಶ್ವರ್ಯ ಹಾಗೂ ಅಮರ್ತ್ಯ ಹೆಗಡೆಯವರ ನಿಶ್ಚಿತಾರ್ಥ ನೆರವೇರಲಿದೆ. 

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 

ನಿಶ್ಚಿತಾರ್ಥ ಕಾರ್ಯಕ್ರಮವನ್ನು ಸರಳವಾಗಿ ನೆರವೇರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಕ್ಕೆ ಕುಟುಂಬಸ್ಥರು ಹಾಗೂ ಆತ್ಮೀಯರಿಗಷ್ಟೇ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 

ನಿಶ್ಚಿತಾರ್ಥ ಸಮಾರಂಭದಲ್ಲಿ ಎಸ್.ಎಂ.ಕೃಷ್ಣ ಕುಟುಂಬಸ್ಥರು ಹಾಗೂ ಡಿಕೆ.ಶಿವಕುಮಾರ್ ಕುಟುಂಬಸ್ಥರು ಭಾಗಿಯಾಗಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com