ಕುಖ್ಯಾತ ನಾಲ್ವರು ಕಳ್ಳರ ಬಂಧನ: 16 ಲಕ್ಷ ರೂ.ಮೌಲ್ಯದ ಮಾಲು ವಶ

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿರುವ ಉಪ್ಪಾರಪೇಟೆ ಪೊಲೀಸರು 318 ಗ್ರಾಂ ತೂಕದ ಆಭರಣ, 30 ಸಾವಿರ ರೂ.ನಗದು ವಶಪಡಿಸಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿರುವ ಉಪ್ಪಾರಪೇಟೆ ಪೊಲೀಸರು 318 ಗ್ರಾಂ ತೂಕದ ಆಭರಣ, 30 ಸಾವಿರ ರೂ.ನಗದು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಅಪ್ರೋಜ್ (40), ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಲೋಹಿತ್ (21), ಬೆಂಗಳೂರು ರವಿ (52), ಬಳ್ಳಾರಿ ಜಿಲ್ಲೆಯ ಅಕ್ಷಯ್ ಸುಶೀಲೇಂದ್ರರಾವ್ ಸಂಕನೂರ್ ಬಂಧಿತ ಆರೋಪಿಗಳು.

ಅಕ್ಟೋಬರ್ 19ರಂದು ಮಧ್ಯಾಹ್ನ 12 ಗಂಟೆಗೆ ಹಾಸನದಿಂದ ಬೆಂಗಳೂರಿಗೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಿ ಮಧ್ಯಾಹ್ನ 3 ಗಂಟೆಗೆ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ವ್ಯಕ್ತಿಯೊಬ್ಬರ ಬ್ಯಾಗ್ ಕಾಣೆಯಾಗಿತ್ತು. ಬ್ಯಾಗ್ ನಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಮತ್ತು 50 ಸಾವಿರ ರೂ.ನಗದು ಹಣವಿತ್ತು. ಈ ಬಗ್ಗೆ ಅವರು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com