ಮಾಗಡಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ಚಾಲನೆ

ಮಾಗಡಿ ತಾಲೂಕಿನ ವಿವಿಧೆಡೆ ಇಂದು ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.
ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ ನಾರಾಯಣ್ , ಶಾಸಕ ಮಂಜುನಾಥ್ ಮತ್ತಿತರರು
ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ ನಾರಾಯಣ್ , ಶಾಸಕ ಮಂಜುನಾಥ್ ಮತ್ತಿತರರು
Updated on

ರಾಮನಗರ: ಮಾಗಡಿ ತಾಲೂಕಿನ ವಿವಿಧೆಡೆ ಇಂದು ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಆಗಲಕೋಟೆ ಗ್ರಾಮ ಪಂಚಾಯಿತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ಸಚಿವರು, ಹೇಳಿಗೆಹಳ್ಳಿ ಕಾಲೋನಿಯ ನಿವೇಶನಗಳ ಹಕ್ಕುಪತ್ರ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಶಾಸಕ ಮಂಜುನಾಥ್, ರಾಮನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹೆಚ್. ಎನ್. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು. 

ಮೇಲನಹಳ್ಳಿ ಗ್ರಾಮದಲ್ಲಿ 415 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ  ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ  ಸಚಿವರು, ಈ ಸಂಸ್ಥೆಯ ಮೂಲಕ ಸ್ಥಳೀಯ ಯುವಜನತೆಗೆ ಉತ್ತಮ ಗುಣಮಟ್ಟದ ಕೌಶಲ್ಯ ತರಬೇತಿ ದೊರಕಲಿದೆ ಎಂದಿದ್ದಾರೆ.

ಮಾಡಬಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಜೇನುಕಲ್ಲುಪಾಳ್ಯದಲ್ಲಿ ಪರಿಶಿಷ್ಟ ಪಂಗಡದ ನಾಗರಿಕರಿಗೆ ವಾಸಸ್ಥಳದ ಜಮೀನಿನ ಹಕ್ಕುಪತ್ರ ವಿತರಿಸಿದರು. ಒಟ್ಟು 54 ಜನರಿಗೆ ಇದನ್ನು ವಿತರಿಸಲಾಗಿದ್ದು, ಇವರ ಬದುಕಿನ ಸುಧಾರಣೆ ಹಾಗೂ ಅಭಿವೃದ್ಧಿಯ ನಿಟ್ಟಿನಲ್ಲಿ ಇದು ಪೂರಕವಾಗಲಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com