ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ‌ ಯುವಕನ ಕೊಲೆ

ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಂದ್ರಾ ಲೇಔಟ್ ನ ಗಂಗೋಡನಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಂದ್ರಾ ಲೇಔಟ್ ನ ಗಂಗೋಡನಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಗಂಗೋಡನಹಳ್ಳಿಯ ಸಾಹಿಲ್ ಕೊಲೆಯಾದವರು. ಸಾಹೀಲ್ ಮನೆಯ ಸಮೀಪದ ಮಾರಮ್ಮನ ದೇವಸ್ಥಾನ ಬಳಿ ರಾತ್ರಿ 12 ಗಂಟೆಯ ವೇಳೆ ಮೂವರು ಯುವಕರ ನಡುವೆ ಕ್ಲುಲಕ‌‌ ಕಾರಣಕ್ಕೆ ಜಗಳ ಉಂಟಾಗಿದೆ. ಗಲಾಟೆಯು ವಿಕೋಪಕ್ಕೆ ತಿರುಗಿದಾಗ, ಎದುರಾಳಿಗಳು ಸಾಹಿಲ್‌ ನ ಮೇಲೆ  ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡ ಸಾಹಿಲ್ ನನ್ನು ಕಿಮ್ಸ್ ಅಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com