ನಾಲೆ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವು

ನಾಲೆಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಡ್ಯ: ನಾಲೆಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆದಿದೆ.

ಮಹೇಶ್(೨೮) ಮೃತ ಕಾರ್ಮಿಕನಾಗಿದ್ದು, ಈತ ಮೂಲತಃ ಚಾಮರಾಜನಗರ ಜಿಲ್ಲೆಯ ಬೇಗೂರಿನ ನಿವಾಸಿ ಎಂದು ತಿಳಿದು ಬಂದಿದೆ.

ಎಂದಿನಂತೆಯೇ ಶುಕ್ರವಾರ ಬೆಳಗ್ಗೆ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆಯುತ್ತಿದ್ದ ನಾಲೆಯ ಕೆಲಸಕ್ಕೆ ತೆರಳಿದ್ದರು. ಸಂಜೆ ಕೆಲಸ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆಯೆ ನಾಲೆವಾಡೆಯ ಮಣ್ಣುರಾಶಿ ಮಹೇಶ್ ಮೇಲೆ ಕುಸಿದು ಬಿದ್ದಿದೆ. ಗಾಯಗೊಂಡಿದ್ದ ಕಾರ್ಮಿಕ ಮಹೇಶ್ನನ್ನು ಸ್ಥಳೀಯ ಪಾಂಡವಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
-ನಾಗಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com