ಶಾಲೆ ಆರಂಭ ಕುರಿತು ಒಂದು ವಾರದಲ್ಲಿ ಆರೋಗ್ಯ ಇಲಾಖೆಯಿಂದ ಸರ್ಕಾರಕ್ಕೆ ವರದಿ: ಶ್ರೀರಾಮುಲು

ಶಾಲಾ-ಕಾಲೇಜುಗಳ ಆರಂಭದ ವಿಚಾರದಲ್ಲಿ ರಾಜ್ಯ ಸರ್ಕಾರ ಆತುರ ತೋರುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಮೈಸೂರಿನಲ್ಲಿಂದು ತಿಳಿಸಿದ್ದಾರೆ.
ಶ್ರೀರಾಮುಲು
ಶ್ರೀರಾಮುಲು
Updated on

ಮೈಸೂರು: ಶಾಲಾ-ಕಾಲೇಜುಗಳ ಆರಂಭದ ವಿಚಾರದಲ್ಲಿ ರಾಜ್ಯ ಸರ್ಕಾರ ಆತುರ ತೋರುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಮೈಸೂರಿನಲ್ಲಿಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ತಮಗೆ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತ ಮುಖ್ಯ. ಸರ್ಕಾರ ನೇಮಿಸಿರುವ ತಜ್ಞರ ಸಮಿತಿ ನೀಡುವ ವರದಿ ಅಧರಿಸಿ ಶಾಲಾ ಕಾಲೇಜುಗಳ ಆರಂಭದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಶಾಲೆ ಆರಂಭಿಸಬೇಕೋ ಅಥವಾ ಬೇಡವೋ ಅನ್ನುವ ಬಗ್ಗೆ, ಒಂದು ವಾರದಲ್ಲಿ ಆರೋಗ್ಯ ಇಲಾಖೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು, ಎಲ್ಲಾ ಕ್ಷೇತ್ರದ ತಜ್ಞರ ಅಭಿಪ್ರಾಯ ಪಡೆಯಲಾಗಿದೆ ಎಂದು ಸಚಿವರು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com