ಕೆ.ಕಲ್ಯಾಣ್ ಸಂಸಾರಕ್ಕೆ ಹುಳಿ ಹಿಂಡಿದ್ದ ಮಂತ್ರವಾದಿ ಶಿವಾನಂದ ವಾಲಿಯ 6 ಕೋಟಿ ರೂ.ಗೂ ಹೆಚ್ಚು ಆಸ್ತಿ ವಶಕ್ಕೆ

ಸ್ಯಾಂಡಲ್ ವುಡ್ ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಕಲಹ ಪ್ರಕರಣದ ಪ್ರಮುಖ ಆರೋಪಿ, ಮಂತ್ರವಾದಿ ಶಿವಾನಂದ ವಾಲಿಗೆ ಸೇರಿದ್ದ ಅಂದಾಜು 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ, ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಡಾ. ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.
ಚಿತ್ರ ಸಾಹಿತಿ ಕೆ ಕಲ್ಯಾಣ್
ಚಿತ್ರ ಸಾಹಿತಿ ಕೆ ಕಲ್ಯಾಣ್
Updated on

ಬೆಳಗಾವಿ: ಸ್ಯಾಂಡಲ್ ವುಡ್ ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಕಲಹ ಪ್ರಕರಣದ ಪ್ರಮುಖ ಆರೋಪಿ, ಮಂತ್ರವಾದಿ ಶಿವಾನಂದ ವಾಲಿಗೆ ಸೇರಿದ್ದ ಅಂದಾಜು 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ, ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಡಾ. ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.

ನಗರದ ಮಾಳಮಾರುತಿ ‌ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಪೊಲೀಸರು ಕೆ.ಕಲ್ಯಾಣ್ ಅವರ ಪತ್ನಿ ಹಾಗೂ ಅತ್ತೆ, ಮಾವ ಅವರನ್ನು ರಕ್ಷಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಶಿವಾನಂದ ವಾಲಿಯನ್ನು ವಶಕ್ಕೆ ಪಡೆದು ಮಾಳಮಾರುತಿ ಠಾಣೆಯ ಸಿಪಿಐ ನೇತೃತ್ವದಲ್ಲಿ ತನಿಖೆ ಕೈಗೊಂಡು 9 ಮ್ಯಾಕ್ಸಿಕ್ಯಾಬ್, 350 ಗ್ರಾಂ ಚಿನ್ನಾಭರಣ, 6 ಕೆ.ಜಿ ಬೆಳ್ಳಿ ಸೇರಿ ಅಂದಾಜು 5 ರಿಂದ 6 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಹುಬ್ಬಳ್ಳಿ-ಧಾರವಾಡ, ಬೆಂಗಳೂರು ಸೇರಿ ಬೆಳಗಾವಿ ನಗರದಲ್ಲಿ ವಾಲಿಗೆ ಸೇರಿರುವ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಾನಂದ ವಾಲಿ ಎಂಬ ಮಂತ್ರವಾದಿಯನ್ನು ವಿಚಾರಣೆ ಮಾಡಿದ್ದೇವೆ, ಕೆ. ಕಲ್ಯಾಣ್ ಪತ್ನಿಗೆ ಕಂಟಕ ಇದೆ ಸರಿಪಡಿಸುವೆ ಎಂದು ಮನೆ ಕೆಲಸದವಳಾದ ಗಂಗಾ ಕುಲಕರ್ಣಿ ಬಳಸಿಕೊಂಡು ಆರೋಪಿ ಹಣ ಲಪಟಾಯಿಸಿದ್ದಾನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com