ಬಳ್ಳಾರಿ: ಹೊಲದಲ್ಲಿ ಬೆಳೆದಿದ್ದ 1.75ಲಕ್ಷ ರೂ ಮೌಲ್ಯದ ಗಾಂಜಾ ವಶ, ಓರ್ವನ ಬಂಧನ

ಮೆಣಸಿನಕಾಯಿ ಬೆಳೆಯೊಂದಿಗೆ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ರೈತನೋರ್ವನನ್ನು ಪೊಲೀಸರು ಬಂಧಿಸಿ 1.75ಲಕ್ಷ ರೂ ಮೌಲ್ಯದ ಗಾಂಜಾ ಬೆಳೆ ವಶಪಡಿಸಿಕೊಂಡಿದ್ದಾರೆ.
ಬಳ್ಳಾರಿ: ಹೊಲದಲ್ಲಿ ಬೆಳೆದಿದ್ದ 1.75ಲಕ್ಷ ರೂ ಮೌಲ್ಯದ ಗಾಂಜಾ ವಶ, ಓರ್ವನ ಬಂಧನ
Updated on

ಬಳ್ಳಾರಿ: ಮೆಣಸಿನಕಾಯಿ ಬೆಳೆಯೊಂದಿಗೆ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ರೈತನೋರ್ವನನ್ನು ಪೊಲೀಸರು ಬಂಧಿಸಿ 1.75ಲಕ್ಷ ರೂ ಮೌಲ್ಯದ ಗಾಂಜಾ ಬೆಳೆ ವಶಪಡಿಸಿಕೊಂಡಿದ್ದಾರೆ.

ಕರಿಲಿಂಗಪ್ಪ ತಂದೆ ಪಂಪಣ್ಣ ಬಂಧಿತ ವ್ಯಕ್ತಿ.

ಸಿರುಗುಪ್ಪ ಪೊಲೀಸ್ ಠಾಣೆಯ ಅಧಿಕಾರಿಗಳಾದ ಸಿಪಿಐ ಟಿಆರ್ ಪವಾರ ಹಾಗೂ ಪಿಎಸ್ ಐ ಗಂಗಪ್ಪ ಬುರ್ಲಿ ಮತ್ತು ಸಿಬ್ಬಂದಿಗಳ ತಂಡವು ಬುಧವಾರ ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ತಾಲ್ಲೂಕಿನ ರಾರವಿಯ ಕರಿಲಿಂಗಪ್ಪ ತಂದೆ ಪಂಪಣ್ಣ ಎಂಬುವವರ ಹೊಲದ ಮೇಲೆ ದಾಳಿ ನಡೆಸಿದೆ. ಈ ವೇಳೆ 13 ಗಾಂಜಾ ಗಿಡ ಸೇರಿದಂತೆ ಒಟ್ಟು 35 ಕೆ.ಜಿ 200 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಬಳ್ಳಾರಿ ಜಿಲ್ಲಾ ಎಸ್​ಪಿ ಅವರ ನಿರ್ದೇಶನದ ಮೇರೆಗೆ ದಾಳಿ ನಡೆದಿದ್ದು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com