ಈದ್ ಮಿಲಾದ್: ನಾಡಿನ ಮುಸ್ಲಿಂ ಬಾಂದವರಿಗೆ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ 

ಈದ್ ಮಿಲಾದ್ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಹಲವು ಸಚಿವರು ನಾಡಿನ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ
Updated on

ಬೆಂಗಳೂರು: ಈದ್ ಮಿಲಾದ್ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಹಲವು ಸಚಿವರು ನಾಡಿನ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಸಂದೇಶಗಳು ಸಮಾಜದಲ್ಲಿ ಸೋದರತ್ವ, ಸೌಹಾರ್ದತೆಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟ್ವೀಟ್ ಮಾಡಿ, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಸಹಬಾಳ್ವೆ, ಸಾಮರಸ್ಯ, ಸೌಹಾರ್ದತೆಗೆ ಪ್ರವಾದಿ ನೀಡಿದ ಸಂದೇಶಗಳು ಸಮಾಜಕ್ಕೆ ದಾರಿದೀಪವಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com