ಹಾಸನ: ಹಣಕ್ಕಾಗಿ ವೃದ್ಧ ದಂಪತಿ ಕೊಲೆ, ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧನ

ವೃದ್ಧ ದಂಪತಿಯನ್ನು ಕೊಲೆ ಮಾಡಿ ನಗದು ಹಾಗೂ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹಾಸನ: ವೃದ್ಧ ದಂಪತಿಯನ್ನು ಕೊಲೆ ಮಾಡಿ ನಗದು ಹಾಗೂ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಆರೋಪಿ ಪ್ರಸಾದ್ ಅಲಿಯಾಸ್ ಗುಂಡ ಎಂಬಾತನ ಎಡಗಾಲಿನ ಮಂಡಿ ಭಾಗಕ್ಕೆ ಗುಂಡು ತಗುಲಿದ್ದು, ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಹೊರವಲಯದ ಆಲಗೋಡನಹಳ್ಳಿ ತೋಟದ ಮನೆಯಲ್ಲಿ ವಾಸವಿದ್ದ ವೃದ್ಧ ದಂಪತಿಗಳಾದ ಮುರುಳೀಧರ್(71) ಹಾಗೂ ಉಮಾದೇವಿ(67) ಅವರನ್ನು ಎರಡು ದಿನಗಳ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಇಂದು ಕೋಳಿಫಾರಂನಲ್ಲಿ ಅಡಗಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದರೆ, ಮತ್ತೊಬ್ಬ ಆರೋಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ದಕ್ಷಿಣ ವಲಯ ಐಜಿ ವಿಫುಲ್‌ಕುಮಾರ್ ಸುದ್ದಿಗೋಷ್ಠಿಯಲ್ಲಿ ಈ ಪ್ರಕರಣ ಸಂಬಂಧ ಮಾಹಿತಿ ನೀಡಿದ್ದು, ಪ್ರಸಾದ್‌ನ ಜೊತೆಗೆ ಬರಗೂರು ಕೊಪ್ಪಲಿನ ಮಂಜಶೆಟ್ಟಿ (23) ಎಂಬಾತನನ್ನು ಕೂಡ ಬಂಧಿಸಲಾಗಿದೆ. ಉಳಿದ ಮೂರು ಜನ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸಲು ಹೊರಟಿದ್ದ ವೇಳೆ ಪ್ರಸಾದ್ ಎಂಬಾತ ಎಸ್‌ಐ ವಿನಯ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು, ಹೀಗಾಗಿ ಆತನ ಮೇಲೆ ಗುಂಡು ಹಾರಿಸಲಾಗಿದೆ. ಸದ್ಯ ಎಸ್‌ಐ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಫುಲ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com