ನಾನು ಚೆನ್ನಾಗಿದ್ದೇನೆ, ಈಗ ಆರೋಗ್ಯವಾಗಿದ್ದೇನೆ: ಡಿಕೆ ಶಿವಕುಮಾರ್

ಕೊರೋನಾದಿಂದ ಗುಣಮುಖರಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜ್ವರದಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರು ಸಂಪೂರ್ಣ ಚೇತರಿಸಿಕೊಂಡು ನಾನು ಚೆನ್ನಾಗಿದ್ದೇನೆ, ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ
ಶಿವಕುಮಾರ್
ಶಿವಕುಮಾರ್

ಬೆಂಗಳೂರು: ಕೊರೋನಾದಿಂದ ಗುಣಮುಖರಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜ್ವರದಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರು ಸಂಪೂರ್ಣ ಚೇತರಿಸಿಕೊಂಡು ನಾನು ಚೆನ್ನಾಗಿದ್ದೇನೆ, ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ.

ಕೊರೋನಾ ಸೋಂಕು ದೃಢಪಟ್ಟಿ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಶಿವಕುಮಾರ್ ಆಗಸ್ಟ್ 31ರಂದು ಡಿಸ್ಚಾರ್ಜ್ ಆಗಿದ್ದರು. ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೆಪ್ಟಂಬರ್ 2 ರಂದು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.

ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವ ಶಿವಕುಮಾರ್ ಅವರನ್ನು ಅಬ್ಸರ್ ವೇಶನ್ ನಲ್ಲಿಡಲಾಗಿತ್ತು.  ಅವರ ಬೆಂಬಲಿಗರನ್ನು ಆಸ್ಪತ್ರೆಯಿಂದ ದೂರವಿರಿಸುವಲ್ಲಿ ಅವರ ವೈಯಕ್ತಿಕ ಸಿಬ್ಬಂದಿ ವಿಫಲರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com