ಕರಾವಳಿ ರಕ್ಷಣಾ ಪಡೆಯಿಂದ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರ ರಕ್ಷಣೆ

ಭಟ್ಕಳ ಬಂದರು ಸಮೀಪ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರನ್ನು ಕರ್ನಾಟಕ ಕರಾವಳಿ ರಕ್ಷಣಾ ಪಡೆ ಶುಕ್ರವಾರ ರಕ್ಷಿಸಿದೆ.
ಮೀನುಗಾರರ ರಕ್ಷಣೆ
ಮೀನುಗಾರರ ರಕ್ಷಣೆ
Updated on

ಮಂಗಳೂರು: ಭಟ್ಕಳ ಬಂದರು ಸಮೀಪ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರನ್ನು ಕರ್ನಾಟಕ ಕರಾವಳಿ ರಕ್ಷಣಾ ಪಡೆ ಶುಕ್ರವಾರ ರಕ್ಷಿಸಿದೆ.

ಕರ್ನಾಟಕ ಕರಾವಳಿಯಲ್ಲಿ ಕಾರ್ಯಾಚರಣೆಗೆ ನಿಯೋಜನೆಗೊಂಡಿರುವ ಭಾರತೀಯ ಕರಾವಳಿ ರಕ್ಷಣಾ ಪಡೆ(ಐಸಿಜಿ)ಯ ‘ಕಸ್ತೂರ್‍ ಬಾ ಗಾಂಧಿ’ ಹಡಗನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು. ಈ ಹಡಗು ಕಳೆದ ರಾತ್ರಿ ಡೇಟಮ್‌ಗೆ ಆಗಮಿಸಿ ಮೀನುಗಾರರೊಂದಿಗೆ ಸಂವಹನ ಸ್ಥಾಪಿಸುವಲ್ಲಿ ಯಶಸ್ವಿಯಾಗಿತ್ತು. ಎಂಜಿನ್ ವೈಫಲ್ಯದಿಂದಾಗಿ ಮೀನುಗಾರಿಕಾ ದೋಣಿ ಅಪಾಯಕ್ಕೆ ಸಿಲುಕಿತ್ತು.

ಮೀನುಗಾರಿಕೆ ಉಪನಿರ್ದೇಶಕರ ಮನವಿಯಂತೆ ಸಮುದ್ರದಲ್ಲಿ ರಕ್ಷಣಾ ಕಾರ್ಯಾಚರಣೆ ಇಂದು ಬೆಳಿಗ್ಗೆ ಪೂರ್ಣಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com