ಕಲಬುರಗಿ : ಗಾಂಜಾ ಪ್ರಕರಣದಲ್ಲಿ ಕರ್ತವ್ಯಲೋಪ, ಪಿಎಸ್ಐ  ಸೇರಿ ನಾಲ್ವರು ಪೋಲೀಸ್ ಅಧಿಕಾರಿಗಳು ಅಮಾನತು

ಕಲಬುರಗಿಯ ಕಾಳಗಿ ಬಳಿಯ ಲಕ್ಷ್ಮಣನಾಯಕ ತಾಂಡಾದ ಕುರಿ ಫಾರ್ಮ್ ಹೌಸ್​ನಲ್ಲಿ ಪತ್ತೆಯಾದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ಕಾಳಗಿ ಠಾಣೆ ಪಿಎಸ್ಐ ಸೇರಿದಂತೆ ನಾಲ್ವರು ಪೋಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪದ ಹಿನ್ನೆಲೆ ನಾಲ್ವರನ್ನು ಅಮಾನತುಗೊಳಿಸಿ ಎಸ್​​​ಪಿ ಸಿಮಿ ಮರಿಯಮ್ ಜಾರ್ಜ್​ ಆದೇಶಿಸಿದ್ದಾರೆ.
ಕಲಬುರಗಿ : ಗಾಂಜಾ ಪ್ರಕರಣದಲ್ಲಿ ಕರ್ತವ್ಯಲೋಪ, ಪಿಎಸ್ಐ  ಸೇರಿ ನಾಲ್ವರು ಪೋಲೀಸ್ ಅಧಿಕಾರಿಗಳು ಅಮಾನತು
Updated on

ಕಲಬುರಗಿ: ಕಲಬುರಗಿಯ ಕಾಳಗಿ ಬಳಿಯ ಲಕ್ಷ್ಮಣನಾಯಕ ತಾಂಡಾದ ಕುರಿ ಫಾರ್ಮ್ ಹೌಸ್​ನಲ್ಲಿ ಪತ್ತೆಯಾದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ಕಾಳಗಿ ಠಾಣೆ ಪಿಎಸ್ಐ ಸೇರಿದಂತೆ ನಾಲ್ವರು ಪೋಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪದ ಹಿನ್ನೆಲೆ ನಾಲ್ವರನ್ನು ಅಮಾನತುಗೊಳಿಸಿ ಎಸ್​​​ಪಿ ಸಿಮಿ ಮರಿಯಮ್ ಜಾರ್ಜ್​ ಆದೇಶಿಸಿದ್ದಾರೆ.

ಅಮಾನತುಗೊಂಡವರನ್ನು ಪಿಎಸ್ಐ ಬಸವರಾಜ ಚಿತಕೋಟೆ, ಎಎಸ್ಐ ನೀಲಕಂಠಪ್ಪ ಹೆಬ್ಬಾಳ, ಮತ್ತು ಬೀಟ್ ಪೊಲೀಸ್ ಕಾನ್ಸ್​ಟೇಬಲ್​​​ಗಳಾದ ಶರಣಪ್ಪ ಹಾಗೂ ಅನಿಲ್ ಭಂಡಾರಿ ಎಂದು ಗುರುತಿಸಲಾಗಿದೆ.

ಕಾಳಗಿ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಣನಾಯಕ್ ತಾಂಡಾದ ಕುರಿ ಫಾರ್ಮ್ ಹೌಸ್​ನಲ್ಲಿ 6 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಯಾಗಿದ್ದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com