ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಿಎಂ ಯಡಿಯೂರಪ್ಪ ವಿರುದ್ದದ ಪ್ರಕರಣ ರದ್ದು

ಗೋಕಾಕ್ ಉಪಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ನಡೆಸಿದ ಆರೋಪ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. 
ಸಿಎಂಯ ಯಡಿಯೂರಪ್ಪ
ಸಿಎಂಯ ಯಡಿಯೂರಪ್ಪ
Updated on

ಬೆಂಗಳೂರು: ಗೋಕಾಕ್ ಉಪಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ನಡೆಸಿದ ಆರೋಪ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. 

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಮತ್ತದರ ಸಂಬಂಧ ಗೋಕಾಕ್ ಜೆಎಂಎಫ್'ಸಿ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್'ಗೆ ಅರ್ಜಿ ಸಲ್ಲಿಸಿದ್ದರು. 

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್, ಮೂಲ ದೂರಿನಲ್ಲಿಯೇ ಅರ್ಜಿದಾರರ ವಿರುದ್ಧದ ಆರೋಪ ಸಾಬೀತುಪಡಿಸುವ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟು ಯಡಿಯೂರಪ್ಪ ವಿರುದ್ಧದ ಮೂಲ ದೂರು ರದ್ದುಪಡಿಸಿ ಆದೇಶಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com