ಡ್ರಗ್ ಕೇಸ್: ಅಕುಲ್ ಬಾಲಾಜಿ, ಸಂತೋಷ್, ಯುವರಾಜ್ ಗೆ ಸತತ 8 ಗಂಟೆಗಳ ಕಾಲ ಸಿಸಿಬಿ ಡ್ರಿಲ್

ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಹಾಗೂ ಮಾಜಿ ಶಾಸಕರ ಪುತ್ರ ಆರ್ ವಿ ಯುವರಾಜ್ ಅವರಿಗೆ ಶನಿವಾರ ಸಿಸಿಬಿ ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.
ಯುವರಾಜ್ - ಅಕುಲ್ ಬಾಲಾಜಿ - ಸಂತೋಷ್
ಯುವರಾಜ್ - ಅಕುಲ್ ಬಾಲಾಜಿ - ಸಂತೋಷ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಹಾಗೂ ಮಾಜಿ ಶಾಸಕರ ಪುತ್ರ ಆರ್ ವಿ ಯುವರಾಜ್ ಅವರಿಗೆ ಶನಿವಾರ ಸಿಸಿಬಿ ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಶುಕ್ರವಾರ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಈ ಮೂವರು ಇಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬಂದಿದ್ದರು.

ಸತತ 8 ಗಂಟೆಗಳ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಕುಲ್ ಬಾಲಾಜಿ, ಸಿಸಿಬಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಮತ್ತೆ ವಿಚಾರಣೆಗೆ ಕರೆದರೇ ಹಾಜರಾಗುತ್ತೇವೆ ಎಂದಿದ್ದಾರೆ.

ಸಿಸಿಬಿ ವಿಚಾರಣೆ ಎದುರಿಸಿದ ಬಳಿಕ ನಟ ಸಂತೋಷ್ ಹಾಗೂ ಅಕುಲ್ ಬಾಲಾಜಿ ಮಾಧ್ಯಮಗಳ ಜೊತೆ ಮಾತನಾಡಿ, ವಿಚಾರಣೆಗೆ ಕರೆದರೆ ಮತ್ತೆ ಬರುವುದಾಗಿ ಹೇಳಿದ್ದಾರೆ. ಆದರೆ ಯುವರಾಜ್ ಅವರನ್ನು ಮಾತ್ರ ಅವರ ಬೆಂಬಲಿಗರು ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ಬಂದು ಕರೆದೊಯ್ದಿದ್ದಾರೆ. ಮಾಧ್ಯಮಗಳ ಕ್ಯಾಮೆರಾ ಮ್ಯಾನ್ ಗಳನ್ನು ತಳ್ಳಿ ಯುವರಾಜ್ ನನ್ನು ಬೆಂಬಲಿಗರು ಕರೆದುಕೊಂಡು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಯಾವುದೇ ಮಾಹಿತಿಯನ್ನು ಯುವರಾಜ್ ನೀಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com