ಮಂಡ್ಯ: ಗ್ರಾಮದ ಮಧ್ಯೆಯೇ ಯುವಕನ ಬರ್ಬರ ಹತ್ಯೆ!

ಗ್ರಾಮದ ಮಧ್ಯೆದಲ್ಲಿಯೇ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಗ್ರಾಮದ ಪೂಜಾರಿ ಮಂಜಣ್ಣ ಎಂಬುವರ ಮಗ ಅಭಿಷೇಕ್(೨೫) ಕೊಲೆಯಾದ ಯುವಕ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಡ್ಯ: ಗ್ರಾಮದ ಮಧ್ಯೆದಲ್ಲಿಯೇ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಗ್ರಾಮದ ಪೂಜಾರಿ ಮಂಜಣ್ಣ ಎಂಬುವರ ಮಗ ಅಭಿಷೇಕ್(೨೫) ಕೊಲೆಯಾದ ಯುವಕ.

ಶನಿವಾರ ರಾತ್ರಿ ೧೦ ಗಂಟೆಗೆ ಮನೆಗೆ ಬಂದ ಅಭಿಷೇಕ್‌ಗೆ ತಾಯಿ ಊಟ ಬಡಿಸಿದ್ದಾರೆ. ಊಟ ಮಾಡುತ್ತಿದಂತೆ ಯಾರೋ ಪೋನ್ ಮಾಡಿದ್ದಾರೆ. ಬಳಿಕ ಎಂದಿನಂತೆ  ರೇಷ್ಮೆ ಸಾಕಣೆ ಮನೆಯಲ್ಲಿ ಮಲಗುವುದಾಗಿ ಹೇಳಿ ಹೊರ ಹೋದವನನ್ನು ಯಾರೊ ದುಷ್ಕರ್ಮಿಗಳು ತಲೆಯ ಭಾಗಕ್ಕೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮುಂಜಾನೆ ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದವರಿಗೆ ಯುವಕನ  ಕೊಲೆಯಾಗಿರುವುದು ತಿಳಿದಿದೆ.

ಅಭಿಷೇಕ್ ಸದಾ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಿದ್ದ. ಹೆತ್ತವರು ಎಷ್ಟೇ ಬುದ್ಧಿವಾದ ಹೇಳಿದರೂ ಸ್ನೇಹಿತರ ಸಹವಾಸದಿಂದ ದೂರವಾಗಿರಲಿಲ್ಲ. ಶನಿವಾರವೂ ಬೆಳಗ್ಗೆ ಮನೆಯಿಂದ ಹೋದನು ರಾತ್ರಿ ೧೦ ಗಂಟೆಗೆ ಬಂದಿದ್ದ. ರೇಷ್ಮೆ ಸಾಕಾಣಿಕೆ ಮನೆಗೆ ಮಲಗಲು ಹೋದವನನ್ನು ಯಾರೋ ಸ್ನೇಹಿತರೇ ಕರೆಸಿಕೊಂಡು ಕೊಲೆ ಮಾಡಿರಬಹುದು ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಗ್ರಾಮದ ಮಧ್ಯ ಭಾಗದಲ್ಲೇ ನಡೆದ ಕೊಲೆಯಿಂದಾಗಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳಕೆ ಪಿಎಸ್‌ಐ ಮಹೇಶ್, ಸಬ್ ಇನ್ಸ್ಪೆಕ್ಟರ್ ಚಂದ್ರಹಾಸನ್ ನಾಯ್ಕ್  ನೇತೃತ್ವದ ಪೊಲೀಸರು ಭೇಟಿ ನೀಡಿ  ಪರಿಶೀಲನೆ ನಡೆಸಿದ್ದು  ಈ ಸಂಬಂಧ ಕೆರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಹಂತಕರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com