ಸರ್ಕಾರದ ವಿವಾದಿತ ನಿರ್ಣಯದ ವಿರುದ್ಧ ತಿರುಗಿ ಬಿದ್ದ ವೈದ್ಯರು, ಸಚಿವರಿಗೆ ಮನವಿ

ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಆಯುಷ್ ವೈದ್ಯರ ಮೇಲೆ ಎಸೆನ್ಷಿಯಲ್ ಮಾಡರ್ನ್ ಮೆಡಿಸಿನ್ (ಇಂಟಗ್ರೇಟೆಡ್ ಸಿಸ್ಟಮ್) ಅಭ್ಯಾಸ ಮಾಡುವ ಸರ್ಕಾರದ ನಿರ್ಧಾರಕ್ಕೆ ನಿಮಾ (ರಾಷ್ಟ್ರೀಯ ಸಮಗ್ರ ವೈದ್ಯಕೀಯ ಸಂಘ-ನಿಮಾ) ವಿರೋಧ ವ್ಯಕ್ತಪಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಆಯುಷ್ ವೈದ್ಯರ ಮೇಲೆ ಎಸೆನ್ಷಿಯಲ್ ಮಾಡರ್ನ್ ಮೆಡಿಸಿನ್ (ಇಂಟಗ್ರೇಟೆಡ್ ಸಿಸ್ಟಮ್) ಅಭ್ಯಾಸ ಮಾಡುವ ಸರ್ಕಾರದ ನಿರ್ಧಾರಕ್ಕೆ ನಿಮಾ (ರಾಷ್ಟ್ರೀಯ ಸಮಗ್ರ ವೈದ್ಯಕೀಯ ಸಂಘ-ನಿಮಾ) ವಿರೋಧ ವ್ಯಕ್ತಪಡಿಸಿದೆ.

ಈ ಕುರಿತಂತೆ ಸಂಘದ ವೈದ್ಯರು ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರನ್ನು ಭೇಟಿ ಮಾಡಿದ್ದು, ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ. ವೈದ್ಯರ ಕುರಿತ ವಿವಾದಿತ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

ಸರ್ಕಾರ ಆದೇಶವು ಸುಪ್ರೀಂ ಕೋರ್ಟ್‌ನ ಇಂಟರ್ಲೋಕ್ಯೂಟರಿ ತೀರ್ಪಿನ ಎಸ್‌ಎಲ್‌ಪಿ (2016 ರ ಸಿವಿಲ್ 26145) ಉಲ್ಲಂಘನೆಯಾಗಿದೆ. ಕೂಡಲೇ ಅದನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಕೇಳಲಾಗಿದೆ ಎಂದು ನಿಮಾ ಹೇಳಿದೆ. ಈ ಬಗ್ಗೆ ಮಾತನಾಡಿದ ನಿಮಾ ಉಪಾಧ್ಯಕ್ಷ ಡಾ.ಭೂಸ್ನೂರ್ಮತ್  ಆರ್.ಜಿ ಅವರು ಮಾತನಾಡಿ, 'ಕೋವಿಡ್ -19 ಸಾಂಕ್ರಾಮಿಕ ರೋಗದಲ್ಲಿ ನಿಮಾ ಸದಸ್ಯರು ತಮ್ಮ ವೈದ್ಯಕೀಯ ಅಭ್ಯಾಸವನ್ನು ಮುಂದುವರಿಸಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಯಾವುದೇ ಕಾನೂನು ತಡೆ ಇಲ್ಲ. ಸಮಗ್ರ ಔಷಧಿ ವ್ಯವಸ್ಥೆಯನ್ನು ಅಭ್ಯಾಸ ಮಾಡುವ ಕುರಿತ ನಿಮಾ ಅರ್ಜಿಯ ವಿಚಾರಣೆ  ಸುಪ್ರೀಂ ಕೋರ್ಟ್‌ನಲ್ಲಿದೆ. ಸರ್ಕಾರ ಸುಪ್ರೀಂ ಕೋರ್ಟ್ ನ ಮಧ್ಯಂತರ ತೀರ್ಪನ್ನು ಗೌರವಿಸಬೇಕು. ಹಠದ ಆದೇಶದ ಮಾಡಿ ನ್ಯಾಯಾಂಗ ನಿಂದನೆ ಮಾಡಬಾರದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com