ಹಾವೇರಿ: ಎತ್ತಿನ ಬಂಡಿ ಸಮೇತ ನೀರುಪಾಲಾಗಿದ್ದ ಇಬ್ಬರು ಯುವಕರ ಶವ ಪತ್ತೆ

ಎರಡು ದಿನಗಳ ಹಿಂದೆ ಎತ್ತಿನ ಬಂಡಿ ಸಮೇತ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕರಿಬ್ಬರ ಶವ ಪತ್ತೆಯಾಗಿದೆ. 
ಮೃತ ಯುವಕರಾದ  ಜಗದೀಶ್ ​ಐರಣಿ  ಹಾಗೂ ಬೆಟ್ಟಪ್ಪ ಮಿಳ್ಳಿ
ಮೃತ ಯುವಕರಾದ ಜಗದೀಶ್ ​ಐರಣಿ ಹಾಗೂ ಬೆಟ್ಟಪ್ಪ ಮಿಳ್ಳಿ
Updated on

ಹಾವೇರಿ: ಎರಡು ದಿನಗಳ ಹಿಂದೆ ಎತ್ತಿನ ಬಂಡಿ ಸಮೇತ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕರಿಬ್ಬರ ಶವ ಪತ್ತೆಯಾಗಿದೆ. 

ನದಿಯಲ್ಲಿ ಮರಳು ತರಲು ಹೋಗಿದ್ದ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದ ಜಗದೀಶ್ ​ಐರಣಿ (25), ಬೆಟ್ಟಪ್ಪ ಮಿಳ್ಳಿ (25) ಎನ್ನುವವರ ಶವ ಇಂದು ಪತ್ತೆಯಾಗಿದೆ.    

ಸತತ ಎರಡು ದಿನಗಳ ಕಾಲ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂಡನೆ ಕಾರ್ಯಾಚರಣೆ ನಡೆದ ನಂತರ  9 ಕಿ.ಮೀ ಅಂತರದಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಸಧ್ಯ ಮೃತ ಯುವಕರ ಕುಟುಂಬ, ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ರಾಣೇಬೆನ್ನೂರು ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com