ಬೆಂಗಳೂರು:ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.
ಗ್ರಾಮಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರ ಮೀಸಲಾತಿ ಅವಧಿಯನ್ನು 10.ವರ್ಷಗಳಿಂದ 5 ವರ್ಷಕ್ಕೆ ಬದಲಾಯಿಸುವ ತಿದ್ದುಪಡಿಯ ಅಗತ್ಯದ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪ್ರಸ್ತಾಪಿಸಿದರು.
ಈಗಾಗಲೇ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೊಳಿಸಲಾಗಿದ್ದು ಅದಕ್ಕೆ ಸದನದ ಒಪ್ಪಿಗೆ ಪಡೆದು ಕಾನೂನು ರೂಪ ನೀಡಲು ಅನುಮತಿ ಪಡೆಯಲಾಯಿತು.
Advertisement