ಕೊರೋನಾದಿಂದ ಗುಣಮುಖರಾದವರಿಗೆ ಮತ್ತೆ ಸೋಂಕು: ಮೈಸೂರು ವೈದ್ಯರಲ್ಲಿ ಆತಂಕ

ಕೊರೋನಾ ಗುಣಮುಖವಾದ ಶೇ.5-10 ರಷ್ಟು ಮಂದಿಯಲ್ಲಿ ಮತ್ತೆ ಸೋಂಕು ಮರುಕಳಿಸುತ್ತಿರುವುದು ಮೈಸೂರು ವೈದ್ಯರಲ್ಲಿ ಮತ್ತೆ ಆತಂಕಕ್ಕೆ ಕಾರಣವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೈಸೂರು: ಕೊರೋನಾ ಗುಣಮುಖವಾದ ಶೇ.5-10 ರಷ್ಟು ಮಂದಿಯಲ್ಲಿ ಮತ್ತೆ ಸೋಂಕು ಮರುಕಳಿಸುತ್ತಿರುವುದು ಮೈಸೂರು ವೈದ್ಯರಲ್ಲಿ ಮತ್ತೆ ಆತಂಕಕ್ಕೆ ಕಾರಣವಾಗಿದೆ.

ಒಂದೆಡೆ ಕೊರೋನಾ ಕೇಸುಗಳು ಹೆಚ್ಚುತ್ತಿದ್ದು, ಮತ್ತೊಂದೆಡೆ ಸೋಂಕು ಮರುಕಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕೊರೋನಾ ವೈರಾಣು ರೋಗಿಯಲ್ಲಿ ನಿಷ್ಕ್ರಿಯವಾಗಿದ್ದು ನಂತರ ಮತ್ತೆ ಉಲ್ಬಣಿಸುತ್ತಿರುವುದು ಗಮನಿಸಬೇಕಾದ ಪ್ರಮುಖ ಅಂಶವಾಗಿದೆ.

ಗುಣಮುಖರಾದ ಶೇ.5-10 ರಷ್ಟು ರೋಗಿಗಳಲ್ಲಿ ಮತ್ತೆ ಸೋಂಕು ಕಾಣಿಸಿಕೊಳ್ಳುತ್ತಿದ್ದು ಎಷ್ಟು ಪ್ರಕರಣಗಳು ಪುನ ಸಕ್ರಿಯಗೊಳ್ಳುತ್ತಿವೆ ಎಂಬ ಬಗ್ಗೆ ನಮಗೆ ಮಾಹಿತಿಯಿಲ್ಲ ಎಂದು ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಸಿ.ಪಿ. ನಂಜರಾಜ್ ತಿಳಿಸಿದ್ದಾರೆ.

ವೈರಸ್ ನ ರೂಪಾಂತರ ಮತ್ತು ಪ್ರತಿ ವ್ಯಕ್ತಿಯಲ್ಲಿ ರೋಗ ನಿರೋಧಕ ಶಕ್ತಿ ವಿಭಿನ್ನವಾಗಿರುವುದರಿಂದ ಪತ್ತೆ ಹಚ್ಚುವುದು ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ಕೊರೋನಾದಿಂದ ಗುಣಮುಖರಾದ ವ್ಯಕ್ತಿಗಳಲ್ಲಿ ಮತ್ತೆ ಸಮಸ್ಯೆಗಳು ಹೆಚ್ಚುತ್ತಿವೆ, ಶ್ವಾಸಕೋಶದ ಫೈಬ್ರೋಸಿಸ್ ಮತ್ತು ನಡವಳಿಕೆಯ ಬದಲಾವಣೆಗಳೊಂದಿಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಗಳಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com