ಸಚಿವ ಮಾಧುಸ್ವಾಮಿಗೆ ಕೊರೋನಾ ದೃಢ, ಆಸ್ಪತ್ರೆಗೆ ದಾಖಲು

ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿ ಅವರೌಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸಚಿವರು ಇಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜೆಸಿ ಮಾಧುಸ್ವಾಮಿ
ಜೆಸಿ ಮಾಧುಸ್ವಾಮಿ
Updated on

ಬೆಂಗಳೂರು: ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿ ಅವರೌಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸಚಿವರು ಇಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ ಸಚಿವರು ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು ವರದಿ ಪಾಸಿಟಿವ್ ಬಂದ ಹಿನ್ನೆಲೆ ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು "ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಆತ್ಮೀಯರೂ ಆದ ಜೆ.ಸಿ. ಮಾಧುಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

"ಮಾಧುಸ್ವಾಮಿ ಅವರು ಶೀಘ್ರ ಗುಣಮುಖರಾಗಿ ತಮ್ಮ ಸಾರ್ವಜನಿಕ ಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ." ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com