ತಿಂಗಳೊಳಗೆ ಮೈಸೂರು ಡಿಸಿ ಶರತ್ ಎತ್ತಂಗಡಿ, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

ಇತ್ತೀಚಿಗಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದಿದ್ದ ಬಿ ಶರತ್ ಅವರನ್ನು ರಾಜ್ಯ ಸರ್ಕಾರ ಸೋಮವಾರ ದಿಢೀರ್ ಎತ್ತಂಗಡಿ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿದೆ.
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ
Updated on

ಬೆಂಗಳೂರು: ಇತ್ತೀಚಿಗಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದಿದ್ದ ಬಿ ಶರತ್ ಅವರನ್ನು ರಾಜ್ಯ ಸರ್ಕಾರ ಸೋಮವಾರ ದಿಢೀರ್ ಎತ್ತಂಗಡಿ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿದೆ.

ರಾಜ್ಯ ಸರ್ಕಾರ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಇಂದು ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ಆಗಸ್ಟ್ 29 ರಂದು ಕಲಬುರಗಿಯಿಂದ ಮೈಸೂರು ಜಿಲ್ಲಾಧಿಕಾರಿಯಾಗಿ ಬಿ ಶರತ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈಗ ಒಂದು ತಿಂಗಳು ತುಂಬುವ ಮೊದಲೇ ಶರತ್ ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com