ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಒಂದು ವರ್ಷದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಗೆ ಕೊಡುಗೆಯಾಗಿ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಮತ್ತು ಶ್ರೀಮಂತ ನಾಗರಿಕರು ತಮ್ಮ ಕೈಲಾದಷ್ಟು ಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವಂತೆ ಕೋರಿದ್ದಾರೆ.
ನಾವು ಕಷ್ಟದ ಸಮಯವನ್ನು ಎದುರಿಸುತ್ತಿದ್ದೇವೆ. ಈ ಸಾಂಕ್ರಾಮಿಕ ರೋಗ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ನನ್ನ ಒಂದು ವರ್ಷದ ವೇತನವನ್ನು ಪರಿಹಾರ ನಿಧಿಗೆ ನೀಡುತ್ತಿದ್ದೇನೆ. ನಿಮ್ಮ ಕೈಲಾದಷ್ಟು ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತಿದ್ದೇನೆ ಎಂದು ಯಡಿಯೂರಪ್ಪ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.
Advertisement