ಬಾಗಲಕೋಟೆ: ವಿಶ್ವವನ್ನೇ ಕಂಗಾಲಾಗಿಸಿರುವ ಮಾರಕ ರೋಗ ಕೊರೊನಾ ವೈರಸ್ ಕೊನೆಗೂ ಬಾಗಲಕೋಟೆ ಜಿಲ್ಲೆಗೆ ಕಾಲಿಟ್ಟಿದೆ.
ಬಾಗಲಕೋಟೆ ನಗರದ ವ್ಯಕ್ತಿಯೊಬ್ಬರಿಗೆ ಕೋವಿಡ್-೧೯ ಸೋಂಕು ದೃಢ ಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ರಾಜೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬುಧವಾರ ಮೂರು ವ್ಯಕ್ತಿಗಳ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ ಒಂದು ಪಾಸಿಟಿವ್ ದೃಢಪಟ್ಟಿದೆ. ಉಳಿದ ಎರಡು ನೆಗಟಿವ್ ಎಂದು ವರದಿಯಾಗಿದೆ. ಸದ್ಯ ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎಸ್ಪಿ ಲೋಕೇಶ್ ಜಗಲಾಸರ ಹೇಳಿಕೆಯೊಂದನ್ನು ನೀಡಿ ವೈರಸ್ ಧೃಡಪಟ್ಟ ವ್ಯಕ್ತಿಯ ಮನೆ ಹಾಗೂ ಕೆಲಸ ಮಾಡಿದ ಸ್ಥಳ ಮತ್ತು ಸಂಫರ್ಕ ಹೊಂದಿದ ಪ್ರದೇಶದಲ್ಲಿ ನಿಗಾವಹಿಸಲಾಗಿದೆ. ನಗರದ ಹಳೇ ಮಾರುಕಟ್ಟೆ ಪ್ರದೇಶದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಪ್ರದೇಶದಲ್ಲಿ ಶುಕ್ರವಾರ ಯಾವುದೇ ವ್ಯಾಪಾರ,ವಹಿವಾಟು ಇರುವುದಿಲ್ಲ. ಸೋಂಕು ದೃಢವ್ಯಕ್ತಿಯ ಟ್ರಾವಲ್ ಹಿಸ್ಟರಿ ಇರುವುದಿಲ್ಲ ಎಂದು ತಿಳಿಸಿದ್ದಾರೆ.
Advertisement