ಬೆಳಗಾವಿ: ನೀರಿನ ಹೊಂಡದಲ್ಲಿ ಬಿದ್ದು ನಾಲ್ವರು ಮಕ್ಕಳ ದುರ್ಮರಣ

ನೀರಿನ ಹೊಂಡದಲ್ಲಿ ಬಿದ್ದು ನಾಲ್ವರು ಮಕ್ಕಳು ದಾರುಣ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಜನಕಟ್ಟಿ ಗ್ರಾಮದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ನೀರಿನ ಹೊಂಡದಲ್ಲಿ ಬಿದ್ದು ನಾಲ್ವರು ಮಕ್ಕಳು ದಾರುಣ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಜನಕಟ್ಟಿ ಗ್ರಾಮದಲ್ಲಿ ನಡೆದಿದೆ. 

ಭಾಗವ್ವಾ ಜಕ್ಕನ್ನವರ(6), ತಾಯಮ್ಮ(5), ಮಾಳಪ್ಪ ಜಕ್ಕನ್ನವರ(4) ಮತ್ತು 3 ವರ್ಷದ ರಾಜಶ್ರೀ ಜಕ್ಕನ್ನವರ ಮೃತ ಮಕ್ಕಳು.

ಕರೆಪ್ಪ ಜಕ್ಕನ್ನವರ ದಂಪತಿಯ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಗೋಕಾಕ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com