ಬಾಗಲಕೋಟೆ: ನಡುರಸ್ತೆಯಲ್ಲೇ ಗರ್ಭಿಣಿಗೆ ಸ್ಥಳೀಯ ಮಹಿಳೆಯರಿಂದ ಹೆರಿಗೆ

ಹೊಲದಲ್ಲಿದ್ದ ಗರ್ಭಿಣಿ ಮಹಿಳೆಯೊಬ್ಬರಿಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸ್ಥಳೀಯ ಮಹಿಳೆಯರೇ ಸೇರಿ ಗರ್ಭಿಣಿಗೆ ಹೆರಿಗೆ ಮಾಡಿಸಿದ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಹೊಲದಲ್ಲಿದ್ದ ಗರ್ಭಿಣಿ ಮಹಿಳೆಯೊಬ್ಬರಿಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸ್ಥಳೀಯ ಮಹಿಳೆಯರೇ ಸೇರಿ ಗರ್ಭಿಣಿಗೆ ಹೆರಿಗೆ ಮಾಡಿಸಿದ ಘಟನೆ ನಡೆದಿದೆ.

ಜಿಲ್ಲೆಯ ಮುಧೋಳ- ನಿಪ್ಪಾಣಿ ರಾಜ್ಯ ಹೆದ್ದಾರಿಯ ಸೈದಾಪೂರ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಗರ್ಭಿಣಿಗೆ ಹೊಲದಲ್ಲಿರುವಾಗಲೇ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಗರ್ಭಿಣಿಯನ್ನು ಬೈಕ್ ಮೇಲೆ ಕೂರಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾದಾಗ ಹೆರಿಗೆ ನೋವು ಹೆಚ್ಚಾಗಿದೆ. ಆಗ ಸ್ಥಳೀಯ ಮಹಿಳೆಯರೇ ಮಹಿಳೆಗೆ ಹೆರಿಗೆ ಮಾಡಿಸಿದ್ದು, ಗರ್ಭಿಣಿ, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ತಕ್ಷಣ ಆಂಬ್ಯುಲೆನ್ಸ್ ಗೆ ಕರೆ ಮಾಡಿದ ಸ್ಥಳೀಯರು, ಆಂಬ್ಯುಲೆನ್ಸ್ ಮೂಲಕ ತಾಯಿ ಮತ್ತು ಮಗುವನ್ನು ಕೊಂಡೊಯ್ದು ಮಹಾಲಿಂಗಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com