ಹಣ್ಣುಗಳಿಗೆ ಎಂಜಲು ಹಚ್ಚಿ ಮಾರಾಟ ಆರೋಪ: ಹಾಸನದಲ್ಲಿ ಮೂವರ ಬಂಧನ

ಮಾರಕ ಕೊರೋನಾ ಮಧ್ಯೆ ಹಣ್ಣುಗಳಿಗೆ ಎಂಜಲು ಹಚ್ಚಿ ಮಾರಾಟ ಮಾಡಲು ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೂವರು ಯುವಕರನ್ನ ಪೊಲೀಸರು ಬಂಧಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾಸನ: ಮಾರಕ ಕೊರೋನಾ ಮಧ್ಯೆ ಹಣ್ಣುಗಳಿಗೆ ಎಂಜಲು ಹಚ್ಚಿ ಮಾರಾಟ ಮಾಡಲು ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೂವರು ಯುವಕರನ್ನ ಪೊಲೀಸರು ಬಂಧಿಸಿದ್ದಾರೆ. 

ಯುವಕರು ದ್ರಾಕ್ಷಿ ಹಣ್ಣುಗಳಿಗೆ ಎಂಜಲು ಹಚ್ಚುತ್ತಿದ್ದಾರೆಂಬ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ವ್ಯಾಪಾರ ಮುಗಿಸಿ ವಾಪಸ್ ಮನೆಗೆ ಹೊರಡುವ ವೇಳೆ ಹಸಿವಿನಿಂದ ಹಣ್ಣು ತಿಂದಿದ್ದೇವೆ ಎಂದು ಪೊಲೀಸರಿಗೆ ಯುವಕರ ಸ್ಪಷ್ಟನೆ ನೀಡಿದ್ದಾರೆ. 

ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಮೂವರು ಯುವಕರಿಗೆ ಅರೋಗ್ಯ ತಪಾಸಣೆ ಮಾಡಲಾಗಿದೆ. ಹಣ್ಣುಗಳನ್ನೂ ಸಹ  ಪರೀಕ್ಷೆಗೊಳಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com